PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ. : ಕರ್ನಾಟಕ ವಾಲ್ಮೀಕಿ ಸೇನೆಯ ಲಾಂಛನವನ್ನು ಇಂದು ನಗರದಲ್ಲಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಬಿಡುಗಡೆಗೊಳಿಸಿ ಸಂಘಟನೆ ಎತ್ತರಕ್ಕೆ ಬೆಳೆಯಲಿ ಎಂದು ಆಶೀರ್ವಧಿಸಿದರು.
ಇದೇ ಸಂದರ್ಭದಲ್ಲಿ ಶ್ರೀಗಳು ಸಂಘಟನೆಯ ಕ್ರಿಯಾಶೀಲತೆಯ ಬಗ್ಗೆ ಮೆಚ್ಚುಗೆವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿನೂತನ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿದ್ಧಲಿಂಗಯ್ಯ ಹಿರೇಮಠ, ಶ್ರೀ ಗವಿಸಿದ್ಧೇಶ್ವರ ಆಯುರ್ವೇದ ಕಾಲೇಜಿನ ಛೇರಮನ್ ಎಸ್. ಆರ್. ನವಲಿ ಹಿರೇಮಠ, ಪ್ರಾಚಾರ್ಯ ಸವಡಿ, ಕರ್ನಾಟಕ ವಾಲ್ಮೀಕಿ ಸೇನೆಯ ರಾಜ್ಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ, ಚಾರ್ಟರ್ಡ ಅಕೌಂಟೆಂಟ್ ಸಂಜಯ್ ಕೊತಬಾಳ, ಸೇನೆಯ ಜಿಲ್ಲಾ ಪ್ರಧಾನ ಕಾರ್ಯದಶಿ ಶರಣಪ್ಪಗೌಡ ಪೋಲಿಸ್‌ಪಾಟೀಲ್ ವಜ್ರಬಂಡಿ, ಯಲಬುರ್ಗಾ ತಾಲೂಕ ಅಧ್ಯಕ್ಷ ಬಸವರಾಜ ಮುಂಡರಗಿ, ಪ್ರಧಾನ ಕಾರ್ಯದರ್ಶಿ ಭೀಮನಗೌಡ ಪೋಲಿಸ್‌ಪಾಟೀಲ್ ಮಂಡಲಮರಿ, ಶಶಿಕುಮಾರ ಅರ್ಕಲ್ ಇತರರಿದ್ದರು

Advertisement

0 comments:

Post a Comment

 
Top