PLEASE LOGIN TO KANNADANET.COM FOR REGULAR NEWS-UPDATES



ಕಲ್ಬುರ್ಗಿಯ ಉದಯೋನ್ಮುಖ ಬರಹಗಾರರ ಬಳಗ ಪ್ರತಿ ವರ್ಷ ನೀಡುವ ಕಾಯಕ ಸಮ್ಮಾನ ಪ್ರಶಸ್ತಿಯನ್ನು ಜಿಲ್ಲೆಯ ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಯವರಿಗೆ ಪ್ರದಾನ ಮಾಡಲಾಯಿತು.ಸಾಹಿತ್ಯ, ಪತ್ರಿಕೋಧ್ಯಮ, ರಂಗಭೂಮಿ ಸೇವೆ, ಸಂಘಟನೆ, ಸಮಾಜ ಸೇವೆಗಳಲ್ಲಿ ವಿಠ್ಠಪ್ಪ ಗೋರಂಟ್ಲಿಯವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ೧೨-೧೨-೨೦೧೦ ರಂದು ಕನ್ನಡ ಭವನ, ಸರದಾರ ವಲ್ಲಭಬಾಯಿ ಪಟೇಲ್ ವೃತ್ತ , ಕಲ್ಬುರ್‍ಗಿಯಲ್ಲಿ ನಡೆದ ಕಾರ್‍ಯಕ್ರಮದಲ್ಲಿ ಡಾ.ಲತಾ ರಾಜಶೇಖರನ್ ಪ್ರಶಸ್ತಿ ಪ್ರದಾನ ಮಾಡಿದರು . ಅಧ್ಯಕ್ಷತೆಯನ್ನು ಹಿರಿಯ ಕವಿ ಜರಗನಹಳ್ಳಿ ಶಿವಶಂಕರ ವಹಿಸಿಕೊಂಡಿದ್ದರು. ಕೃಷ್ಣಾ ಸುಬೇದಾರ್, ದೌಲತರಾಯ್ ಪಾಟೀಲ್ ಮಾಹೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top