PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಸಮಾನ ಮನಸ್ಕ ಕವಿಸಮೂಹ , ಕನ್ನಡನೆಟ್.ಕಾಂ ಪ್ರತಿ ರವಿವಾರದಂದು ಕವಿಗೋಷ್ಠಿ ಕಾರ್‍ಯಕ್ರಮ ಹಮ್ಮಿಕೊಳ್ಳುತ್ತಿದೆ. ಪ್ರತಿವಾರದಂತೆ ಈ ವಾರವೂ ಕವಿಸಮಯ ಕಾರ್‍ಯಕ್ರಮವನ್ನು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರತಿ ರವಿವಾರ ಸಂಜೆ ಜರುಗುವ ಕಾರ್‍ಯಕ್ರಮದಲ್ಲಿ ಕವಿಗಳು ತಮ್ಮ ಸ್ವಂತ ಕವಿತೆ/ಚುಟುಕು/ಶಾಯಿರಿ/ಗಜಲ್ ಗಳನ್ನು ವಾಚಿಸುವರು ,ಓದಿದ ಕವಿತೆಗಳ ಕುರಿತು ಉಪಸ್ಥಿತರಿರುವ ಹಿರಿಯ ಕವಿಗಳು ವಿಮರ್ಶಿಸುವರು.
ತಮ್ಮ ಕವನ ಸಂಕಲನಗಳಿಂದ ಹಾಗೂ ಕೃತಿಗಳಿಂದ ಕನ್ನಡ ಸಾಹಿತ್ಯದಲ್ಲಿ ಗಮನ ಸೆಳೆದಿರುವ ಬಿ.ಪೀರಬಾಷಾ ವಾರದ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಕ್ತ ಕವಿಗೋಷ್ಠಿ ಮತ್ತು ಸಂವಾದ ಕಾರ್‍ಯಕ್ರಮ ನಡೆಯಲಿದೆ.
ಈ ಕವಿ ಸಮಯ ಕಾರ್‍ಯಕ್ರಮ ರವಿವಾರ ೧೨-೧೨-೨೦೧೦ ರಂದು ನಗರದ ಪ್ರವಾಸಿ ಮಂದಿರದಲ್ಲಿ ಕವಿ ಸಮಯ ಸಂಜೆ ೪-೩೦ ಗಂಟೆಗೆ ಜರುಗಲಿದೆ. ಆಸಕ್ತರು ಮತ್ತು ಕವಿಗಳು ಭಾಗವಹಿಸಲು ಕವಿಸಮೂಹ ವಿನಂತಿಸಿದೆ. ವಿವರಗಳಿಗೆ ಸಿರಾಜ್ ಬಿಸರಳ್ಳಿ ೯೮೮೦೨೫೭೪೮೮, ಶಿ.ಕಾ.ಬಡಿಗೇರ ೯೦೩೬೨೬೫೦೩೭ ಸಂಪರ್ಕಿಸಿ

Advertisement

0 comments:

Post a Comment

 
Top