PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ : ಜಿಲ್ಲೆಯ 27 ಜಿಲ್ಲಾ ಪಂಚಾಯತ್ ಮತ್ತು 103 ತಾಲೂಕು ಪಂಚಾಯತ್ ಸ್ಥಾನಗಳಿಗಾಗಿ ನಡೆಯಲಿರುವ ಚುನಾವಣೆಗೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಶ್ವರಚಂದ್ರ ವಿದ್ಯಾಸಾಗರ ರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಶಾಂತಿಯುತ ಮತದಾನಕ್ಕಾಗಿ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ ಎಂದರು. ಸೂಕ್ತ ಬಂದೋಬಸ್ತನ್ನು ಕೈಗೊಳ್ಳಲಾಗಿದ್ದು ಶಾಂತಿಯುತ ಮತದಾನಕ್ಕೆ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ, ಯಾರನ್ನೂ ಮುಂಜಾಗ್ರತ ಕ್ರಮವಾಗಿ ಬಂದಿಸಿಲ್ಲ ಆದರೆ 200 ಜನರ ಮೇಲೆ ನಿಗಾ ಇಡಲಾಗಿದೆ ಎಂದು ಈಶ್ವರಚಂದ್ರ ವಿದ್ಯಾಸಾಗರ ಹೇಳಿದರು.

Advertisement

0 comments:

Post a Comment

 
Top