PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಡಿ. : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸಕ್ತ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು ೨೦೧೧ ರ ಜನವರಿ ೦೭ ರಿಂದ ೦೯ ರವರೆಗೆ ಮೂರು ದಿನಗಳ ಕಾಲ ರಾಜ್ಯದ ೨೦ ಕೇಂದ್ರಗಳಲ್ಲಿ ನಡೆಯಲಿದ್ದು, ಈಗಾಗಲೆ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ.
ಪರೀಕ್ಷೆಗಳನ್ನು ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ ಡಿ. ೩೧ ರ ನಂತರವೂ ತಲುಪದೇ ಇದ್ದಲ್ಲಿ, ಅಭ್ಯರ್ಥಿಗಳು ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದಾಗಿದೆ. ಪರೀಕ್ಷಾ ಕೇಂದ್ರದ ವಿಳಾಸವನ್ನು ಅಭ್ಯರ್ಥಿಗಳು ದೂರವಾಣಿ ಸಂಖ್ಯೆ ೦೮೦- ೨೬೬೨೩೫೮೪ ಕ್ಕೆ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಕಸಾಪ ಗೌರವ ಕಾರ್ಯದರ್ಶಿ ಎಚ್.ಕೆ. ಮಳಲಿಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

0 comments:

Post a Comment

 
Top