PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಫೆ. : ಗಂಗಾವತಿ ತಾಲೂಕು ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಸತಿ ನಿಲಯದಲ್ಲಿ ಉಪಹಾರ ಸೇವಿಸಿ ಅಸ್ವಸ್ಥರಾಗಿದ್ದ ೧೭ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಎಲ್ಲ ಮಕ್ಕಳೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಸಿ.ಬಿ. ಬಸವರಾಜ್ ಅವರು ತಿಳಿಸಿದ್ದಾರೆ.
ವಸತಿ ನಿಲಯದ ಸುಮಾರು ೨೨೦ ಮಕ್ಕಳು ಫೆ. ೦೧ ರಂದು ಬೆಳಗಿನ ಉಪಹಾರಕ್ಕೆ ವಗ್ಗರಣಿ ಸೇವಿಸಿದ್ದರು, ಆದರೆ ಆ ಪೈಕಿ ೧೭ ಮಕ್ಕಳಿಗೆ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಪ್ರಕರಣದ ವಿಷಯ ತಿಳಿಯುತ್ತಿದ್ದಂತೆಯೇ ಆರೋಗ್ಯ ಇಲಾಖೆಯು ಕೂಡಲೆ ಕ್ರಮ ಕೈಗೊಂಡು ಎಲ್ಲ ಮಕ್ಕಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ತೀವ್ರ ಅಸ್ವಸ್ಥಗೊಂಡ ಇಬ್ಬರು ಮಕ್ಕಳಿಗೆ ಗಂಗಾವತಿ ನಗರದ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿದೆ. ಆಹಾರದ ಮಾದರಿ ಹಾಗೂ ಕುಡಿಯುವ ನೀರಿನ ಮಾದರಿಯನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಅಲ್ಲದೆ ವಸತಿ ನಿಲಯದ ಅಡುಗೆ ಮಾಡಿದ ಪಾತ್ರೆಗಳು, ಆಹಾರ ಸಾಮಗ್ರಿ, ಸಂಗ್ರಹಣಾ ವ್ಯವಸ್ಥೆಯ ಕುರಿತು ತಪಾಸಣೆ ಮಾಡಲಾಗಿದೆ. ಕುಡಿಯುವ ನೀರಿಗೆ ಹಾಲೋಜಿನ್ ಮಾತ್ರೆಗಳನ್ನು ಉಪಯೋಗಿಸಲು ಸೂಚಿಸಿ, ಮಾತ್ರೆಗಳನ್ನು ವಿತರಿಸಲಾಗಿದ್ದು, ಅಸ್ವಸ್ಥಗೊಂಡ ಎಲ್ಲ ಮಕ್ಕಳೂ ಚೇತರಿಕೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಸಿ.ಬಿ. ಬಸವರಾಜ್ ಅವರು ತಿಳಿಸಿದ್ದಾರೆ

Advertisement

0 comments:

Post a Comment

 
Top