PLEASE LOGIN TO KANNADANET.COM FOR REGULAR NEWS-UPDATES

ಜೆಡಿಎಸ್ ಪಕ್ಷ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತಿರುವ ಪಕ್ಷಾಂತರ ನಿಷೇದ ಕಾಯ್ದೆಗೆ ತಿದ್ದುಪಡಿ ತರಲಾಗುವುದೆಂದು ಜೆಡಿ ಎಸ್ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಕೀಲ್ ನವಾಜ್ ಹೇಳಿದ್ದಾರೆ. ಅವರು ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಶಾಸಕರಾಗಿದ್ದ ಕರಡಿ ಸಂಗಣ್ಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಿರುವುದು ಆಘಾತ ತಂದಿದೆ. ಜಾತ್ಯತೀತ ಮೌಲ್ಯಗಳ ಮುಖಾಂತರ ಮತ ಪಡೆದು ಆಯ್ಕೆಯಾಗಿದ್ದ ಸಂಗಣ್ಣ ಕರಡಿ ಕ್ಷೇತ್ರದ ಅಭಿವೃದ್ದಿಗಾಗಿ ಪಕ್ಷಾಂತರ ೆನ್ನುವುದು ಮತದಾರರಿಗೆ ಮಾಡುತ್ತಿರುವ ಅಪಮಾನ ಎಂದು ಖಂಡಿಸಿದರು. ಈ ಸಂದರ್ಭದಲ್ಲಿ ಜೆಡಿ ಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಬಾಬಾ ಅರಗಂಜಿ ಗೈರುಹಾಜರಿ ಎದ್ದು ಕಂಡಿತು, ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಕೀಲ್ ನವಾಜ್ ಜಿಲ್ಲಾಧ್ಯಕ್ಷ ಬಾಬಾ ಅರಗಂಜಿ ಪಕ್ಷದಲ್ಲೇ ಇದ್ದಾರೆ ಎಂದರು.

Advertisement

0 comments:

Post a Comment

 
Top