PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. : ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ವಿವಿಧ ಸಂಸ್ಥೆಗಳು ಸ್ಥಾಪಿಸಿರುವ ದತ್ತಿನಿಧಿಯಿಂದ ನೀಡಲಾಗುವ ಪ್ರಶಸ್ತಿಗಳಿಗಾಗಿ ಅರ್ಹ ಪತ್ರಕರ್ತರಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸಿದ್ದು, ಇದರಿಂದ ಪ್ರತಿವರ್ಷ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಸಾಮಾಜಿಕ ಸಮಸ್ಯೆ ಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ೧೦೦೦೦ ರೂ.ಗಳ ನಗದು ಪ್ರಶಸ್ತಿ ನೀಡಲು ಉದ್ದೇಶಿಸಿದೆ.
ಮೈಸೂರಿನ ಮೈಸೂರು ದಿಗಂತ ಪತ್ರಿಕಾ ಸಂಸ್ಥೆಯು ಮಾಧ್ಯಮ ಅಕಾಡೆಮಿಯಲ್ಲಿ ೧ ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸಿದ್ದು, ಇದರಿಂದ ಪ್ರತಿವರ್ಷ ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ಮಾನವೀಯ ಸಮಸ್ಯೆ ಗಳನ್ನು ಪರಿಣಾಮಕಾರಿಯಾಗಿ ಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ೧೦೦೦೦ ರೂ.ಗಳ ನಗದ ಪ್ರಶಸ್ತಿ ನೀಡಲಾಗುತ್ತಿದೆ.
೨೦೧೦ ಮತ್ತು ೨೦೧೧ ನೇ ಸಾಲಿನಲ್ಲಿ ಹೀಗೆ ಎರಡು ವರ್ಷದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ೨೦೧೦ ಮತ್ತು ೨೦೧೧ ರಲ್ಲಿ ಪ್ರಕಟವಾದ ಲೇಖನ-ವರದಿಗಳೊಂದಿಗೆ ಲೇಖಕರು ತಮ್ಮ ಸ್ವ-ವಿವರಗಳನ್ನು ಬಿಳಿ ಹಾಳೆಯಲ್ಲಿ ಬರೆದು, ಆಯಾ ದತ್ತಿನಿಧಿಯ ಹೆಸರು ಹಾಗೂ ವರ್ಷವನ್ನು ನಮೂದಿಸಿ ಕಳುಹಿಸಿಕೊಡಬೇಕು. ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ, ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ-ವರದಿಗಳನ್ನು ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-೦೧ ಇವರಿಗೆ ಆಗಸ್ಟ್ ೨೦ ರ ಒಳಗಾಗಿ ಸಲ್ಲಿಸುವಂತೆ ಅಕಾಡೆಮಿಯ ಕಾರ್ಯದರ್ಶಿ ಹಮೀದ್ ಖಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement

0 comments:

Post a Comment

 
Top