PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಅ. ೧೪ (ಕ.ವಾ) : ಕೆನರಾ ಬ್ಯಾಂಕ್ ಮತ್ತು ವಿ.ಆರ್.ಡಿ.ಎಮ್. ಟ್ರಸ್ಟನಿಂದ ಪ್ರಾಯೋಜಿತ  ದೇಶಪಾಂಡೆ ರುಡ್‌ಸೆಟ್ ಸಂಸ್ಥೆ (ರಿ), ಹಳಿಯಾಳ ಇವರು, ಮೊಬೈಲ್ ಫೋನ್ ರಿಪೇರಿ ಉಚಿತ ತರಬೇತಿಗಾಗಿ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಿದ್ದಾರೆ.
ತರಬೇತಿಯು ನವೆಂಬರ್ ೦೨ ರಿಂದ ಒಂದು ತಿಂಗಳ ಕಾಲ ನಡೆಯಲಿದ್ದು, ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ. ೧೮ ರಿಂದ ೩೫ ವರ್ಷದೊಳಗಿನ ಆಸಕ್ತ ಯುವಕರು ತರಬೇತಿಯಲ್ಲಿ ಭಾಗವಹಿಸಬಹುದು.
ಅರ್ಜಿ ಸಲ್ಲಿಸಲು ಇಚ್ಛಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ/ಮೊಬೈಲ್ ಸಂಖ್ಯೆ, ಪಡೆಯಲಿಚ್ಛಿಸುವ ತರಬೇತಿ (ಮೊಬೈಲ್ ಫೋನ್ ರಿಪೇರಿ), ವಿದ್ಯಾರ್ಹತೆ, ಆಯ್ದ ವಿಷಯದಲ್ಲಿ ಪ್ರಾಥಮಿಕ ಜ್ಞಾನ/ಅನುಭವ, ಮುಂತಾದ ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯಲ್ಲಿ ಬರೆದು, ನಿರ್ದೇಶಕರು, ದೇಶಪಾಂಡೆ ರುಡ್‌ಸೆಟ್ ಸಂಸ್ಥೆ, ಉದ್ಯೋಗ ವಿದ್ಯಾನಗರ, ಹಳಿಯಾಳ, ಇವರನ್ನು ಅ. ೨೨ ರಂದು ತರಬೇತಿಗಾಗಿ ನೋಂದಣಿ ಮಾಡಿಸಲು ಸಂಸ್ಥೆಗೆ ಭೇಟಿ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮತ್ತು ಸಂಸ್ಥೆಗೆ ಬರುವಾಗ ತರಬೇಕಾದ ದಾಖಲಾತಿಗಳ ಬಗೆಗೆ ಸಂಸ್ಥೆಯ ದೂರವಾಣಿ ಸಂಖ್ಯೆ  ೦೮೨೮೪-೨೨೦೮೦೭, ೯೪೮೨೧೮೮೭೮೦ / ೯೪೮೩೪೮೫೪೮೯ ನ್ನು ಸಂಪರ್ಕಿಸಲು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. 

Advertisement

0 comments:

Post a Comment

 
Top