PLEASE LOGIN TO KANNADANET.COM FOR REGULAR NEWS-UPDATES



ಕೊಪ್ಪಳ ಅ. : ಡಿ.ವಿ. ಸದಾನಂದಗೌಡ ಅವರು ಅ. ೨೯ ರಂದು ಒಂದು ದಿನದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ ೮ ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು, ಬೆಳಿಗ್ಗೆ ೯-೩೦ ಗಂಟೆಗೆ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ಆಗಮಿಸುವರು.  ನಂತರ ರಸ್ತೆ ಮೂಲಕ ಕೊಪ್ಪಳ ನಗರಕ್ಕೆ ಆಗಮಿಸಿ, ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.  ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದಿಂದ ಹಲಗೇರಿ ಮಾರ್ಗವಾಗಿ ಹಿರೇಸಿಂದೋಗಿಗೆ ತೆರಳುವರು,  ಹಿರೇಸಿಂದೋಗಿಯಲ್ಲಿ ನೆರೆ ಸಂತ್ರಸ್ಥರಿಗಾಗಿ ನಿರ್ಮಿಸಲಾಗಿರುವ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.  ಮಧ್ಯಾಹ್ನ ೧೨-೩೦ ಗಂಟೆಗೆ ಡಂಬರಹಳ್ಳಿ ಗ್ರಾಮಕ್ಕೆ ತೆರಳಿ ಸಾವಯವ ಕೃಷಿಕರಾದ ಪವಿತ್ರಾ ಮತ್ತು ಆನಂದರಡ್ಡಿ ಇಮ್ಮಡಿ ಅವರ ಮನೆ ಮತ್ತು ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡುವರು, ನಂತರ ಜಿಲ್ಲೆಯ ಸಾವಯವ ಕೃಷಿಕರು, ಯುವ ಕೃಷಿಕರು, ಕೃಷಿ ಕಾರ್ಮಿಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 

Advertisement

0 comments:

Post a Comment

 
Top