PLEASE LOGIN TO KANNADANET.COM FOR REGULAR NEWS-UPDATES



ಬೆಂಗಳೂರು, ಅ.19: ಉದ್ಯಾನನಗರಿ ಬೆಂಗಳೂರಿಗರ ಬಹು ನಿರೀಕ್ಷೆಯ ‘ನಮ್ಮ ಮೆಟ್ರೋ’ ರೈಲನ್ನು ಕೇಂದ್ರ ನಗರಾಭಿವೃದ್ಧಿ ಸಚಿವ ಕಮಲ್‌ನಾಥ್ ನಾಳೆ(ಅ.20) ಬೆಳಗ್ಗೆ 10:30ಕ್ಕೆ ಇಲ್ಲಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಏರ್ಪಡಿಸಲಾಗಿರುವ ಕಾರ್ಯಕ್ರಮದಲ್ಲಿ ಉದ್ಘಾಟಿಸಲಿದ್ದಾರೆ. ರೈಲ್ವೆ ಸಚಿವ ದಿನೇಶ್ ತ್ರಿವೇದಿ, ರೈಲ್ವೆ ಖಾತೆಯ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ, ಮುಖ್ಯ ಮಂತ್ರಿ ಡಿ.ವಿ. ಸದಾನಂದ ಗೌಡ ಸೇರಿದಂತೆ ರಾಜ್ಯ ಸರಕಾರದ ಸಚಿವರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಗರದ ಬೈಯಪ್ಪನ ಹಳ್ಳಿಯಿಂದ ಮಹಾತ್ಮಾ ಗಾಂಧಿ ರಸ್ತೆಯ ವರೆಗೆ ರೈಲು ಸಂಚಾರಕ್ಕೆ ಹಸಿರು ನಿಶಾನೆ ದೊರೆಯಲಿದೆ.

Advertisement

0 comments:

Post a Comment

 
Top