PLEASE LOGIN TO KANNADANET.COM FOR REGULAR NEWS-UPDATES


 ಕೊಪ್ಪಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಜ. ೦೩ ರಿಂದ ೦೪ ರವರೆಗೆ ಎರಡು ದಿನಗಳ ಕಾಲ ಕೊಪ್ಪಳದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
  ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟವನ್ನು ಕಳೆದ ಡಿ. ೨೭ ರಿಂದ ೨೯ ರವರೆಗೆ ನಡೆಸಲು ಉದ್ದೇಶಿಸಲಾಗಿತ್ತು.  ಆದರೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ೦೩ ದಿನಗಳ ಶೋಕಾಚರಣೆಯ ಕಾರಣ ಕ್ರೀಡಾಕೂಟವನ್ನು ಮುಂದೂಡಲಾಗಿತ್ತು.  ಇದೀಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಜ. ೦೩ ರಿಂದ ನಡೆಸಲು ನಿದಗಿಪಡಿಸಲಾಗಿದ್ದು, ಉದ್ಘಾಟನಾ ಸಮಾರಂಭ ಜ. ೦೩ ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.  ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು.   ಕ್ರೀಡಾಕೂಟದ ಸಮಾರೋಪ ಸಮಾರಂಭ ಜ. ೦೪ ರಂದು ಸಂಜೆ ೪ ಗಂಟೆಗೆ ನಡೆಯಲಿದ್ದು,  ಈಶಾನ್ಯ ವಲಯದ ಪೊಲೀಸ್ ಮಹಾನಿರೀಕ್ಷಕ ಮಹ್ಮದ್ ವಜೀರ್ ಅಹ್ಮದ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top