PLEASE LOGIN TO KANNADANET.COM FOR REGULAR NEWS-UPDATES

 ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕಕ್ಕೆ ನೌಕರ ಭವನ ಅಭಿವೃದ್ಧಿಗಾಗಿ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ೧೫. ೮೫ ಲಕ್ಷ ರೂ.ಗಳ ಚೆಕ್ ಅನ್ನು ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಅವರಿಗೆ ನೀಡಿದರು.
  ಗಂಗಾವತಿಯಲ್ಲಿ ಜರುಗಿದ ೭೮ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಜಿಲ್ಲೆಯ ಸರ್ಕಾರಿ ನೌಕರರ ಒಂದು ದಿನದ ವೇತನದಿಂದ ಒಟ್ಟು ೬೩. ೪೩ ಲಕ್ಷ ರೂ.ಗಳು ಸಂಗ್ರಹವಾಗಿತ್ತು.  ಸಮ್ಮೇಳನಕ್ಕೂ ಮೊದಲು, ನೌಕರರ ವೇತನದಿಂದ ಸಂಗ್ರಹವಾಗುವ ಮೊತ್ತದಲ್ಲಿ ಕನಿಷ್ಟ ಶೇ. ೨೫ ರಷ್ಟು ಮೊತ್ತವನ್ನು ಸರ್ಕಾರಿ ನೌಕರರ ಸಂಘದ ಕಟ್ಟಡ ನಿರ್ಮಾಣಕ್ಕೆ ನೀಡುವಂತೆ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲಾ ಕಾರ್ಯಕಾರಿ ಸಮಿತಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು.  ಇದರನ್ವಯ ಇದೀಗ ಜಿಲ್ಲಾಧಿಕಾರಿಗಳು, ೧೫. ೮೫ ಲಕ್ಷ ರೂ.ಗಳ ಚೆಕ್ ಅನ್ನು ನೌಕರರ ಸಂಘದ ಜಿಲ್ಲಾಧ್ಯಕ್ಷ ಶಂಭುಲಿಂಗನಗೌಡ ಹಲಗೇರಿ ಅವರಿಗೆ ಹಸ್ತಾಂತರಿಸಿದರು.  ಅಲ್ಲದೆ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರ ವರ್ಗದವರಿಗೆ ಜಿಲ್ಲಾಧಿಕಾರಿಗಳು ಅಬಿನಂದನೆ ಸಲ್ಲಿಸಿದರು.  ಈ ಸಂದರ್ಭದಲ್ಲಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಜುಮ್ಮನ್ನವರ, ಸಂಘಟನಾ ಕಾರ್ಯದರ್ಶಿ ತುಕಾರಾಂ ರಾವ್ ಬಿ.ವಿ., ಬಿ.ಎಫ್. ಬೀರನಾಯ್ಕರ್, ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Advertisement

0 comments:

Post a Comment

 
Top