ಕೆರೆಗಳು ಗ್ರಾಮೀಣ ಜನರ ಜೀವನಾಡಿಯಾಗಿದ್ದು, ಕೆರೆಗಳಲ್ಲಿ ತುಂಬಿರುವ ಹೂಳೆತ್ತಿ, ಪುನಶ್ಚೇತನಗೊಳಿಸಿದಲ್ಲಿ ಪಾತಾಳಕ್ಕಿಳಿದಿರುವ ಅಂತರ್ಜಲ ಮಟ್ಟವನ್ನು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಕೊಪ್ಪಳ ಶಾಸಕ ಕರಡಿ ಸಂಗಣ್ಣ ಹೇಳಿದರು.

ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಪಾಟೀಲ್ ಮಾತನಾಡಿ, ಗಿಣಿಗೇರಾ ಕೆರೆ ಪುನಃಶ್ಚೇತನಕ್ಕಾಗಿ ರೂ. ೨೮.೨೪ ಲಕ್ಷ ಮಂಜೂರಾಗಿದ್ದು ಈ ಅನುದಾನದಲ್ಲಿ ಕೆರೆಯ ಕೋಡಿ ದುರಸ್ತಿ, ಬಂಡ್ ನಿರ್ಮಾಣ, ಗೇಟ್ ಹಾಗೂ ಕಾಲುವೆಗಳ ದುರಸ್ತಿ, ಜಲಾನಯನ ಅಭಿವೃದ್ಧಿ, ಸೌಂದರ್ಯೀಕರಣ ಇತ್ಯಾದಿ ಕಾಮಗಾರಿಗಳನ್ನು ಮಾಡಲಾಗುವುದರ ಜತೆಗೆ ಈ ಭಾಗದ ಜನತೆಗೆ ಅನುಕೂಲವಾಗುವಂತೆ ಕೆರೆ ಪುನಃಶ್ಚೇತನಗೊಳಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಸೀತಾ ಗೂಳಪ್ಪ ಹಲಗೇರಿ, ತಾ.ಪಂ. ಅಧ್ಯಕ್ಷ ನಾಗರಾಜ ಚಳ್ಳೊಳ್ಳಿ, ಮುನಿರಾಬಾದ್ ಗ್ರಾ.ಪಂ. ಅಧ್ಯಕ್ಷ ಬಾಲಚಂದ್ರನ್, ಗಿಣಿಗೇರಾ ಗೂಳಪ್ಪ ಹಲಗೇರಿ, ಮಾರುತೆಪ್ಪ ಹಲಗೇರಿ, ಕರಿಯಪ್ಪ ಮೇಟಿ, ನೀಲಪ್ಪ ಮೇಟಿ, ಶೇಖರ್ ಇಂದರಗಿ, ಗ್ರಾ.ಪಂ. ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
0 comments:
Post a Comment