PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ,ಆ.೨೯: ನಗರದ ಶ್ರೀ ಸಿರಸಪ್ಪಯ್ಯ ಸ್ವಾಮಿ ಮಠದಲ್ಲಿ ವಿಶ್ವಕರ್ಮ ಸೇವಾ ಸಮಿತಿ ನಗರ ಘಟಕದ ವತಿಯಿಂದ ಬರುವ ಸೆ.೧೭ ರಂದು ವಿಶ್ವಕರ್ಮ ಪೂಜಾ ಮತ್ತು ಹೋಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಸೇವಾ ಸಮಿತಿ ನಗರ ಘಟಕದ ಅಧ್ಯಕ್ಷ ಮಂಜುನಾಥ ವಾಸಪ್ಪ ಬನ್ನಿಕೊಪ್ಪ ಅವರು ಹೇಳಿದರು.
ನಗರದ ಶ್ರೀ ಸಿರಸಪ್ಪಯ್ಯ ಸ್ವಾಮಿ ಮಠದಲ್ಲಿ ವಿಶ್ವಕರ್ಮ ಸೇವಾ ಸಮಿತಿ ನಗರ ಘಟಕದ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಸೆ.೧೭ ರಂದು ಜರುಗಲಿರುವ ಶ್ರೀ ವಿಶ್ವಕರ್ಮ ಪೂಜಾ ಮತ್ತು ಹೋಮ ಕಾರ್ಯಕ್ರಮಕ್ಕೆ ಜಿಲ್ಲೆಯ ವಿಶ್ವಕರ್ಮ ಸಮಾಜದ ಎಲ್ಲಾ ಹಿರಿಯರು, ಮುತ್ಸದ್ದಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು, ಯುವಕರು, ಗ್ರಾಮೀಣ ಪ್ರದೇಶದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ  ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿಶ್ವಕರ್ಮ ಸೇವಾ ಸಮಿತಿ ನಗರ ಘಟಕದ ಅಧ್ಯಕ್ಷ ಮಂಜುನಾಥ ವಾಸಪ್ಪ ಬನ್ನಿಕೊಪ್ಪ ಅವರು ಮನವಿ ಮಾಡಿಕೊಂಡರು.ಸಭೆಯಲ್ಲಿ ಶ್ರೀ ಧರಣೇಂದ್ರ ಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ರಮೇಶ ಅಕ್ಕಸಾಲಿ, ಮಾಜಿ ಅಧ್ಯಕ್ಷ ನಾರಾಣಪ್ಪ ಪತ್ತಾರ, ಸುರೇಶ ಬಡಿಗೇರ, ಶ್ರೀಶೈಲ ಅಳವಂಡಿ, ಪ್ರಕಾಶ ಅಳವಂಡಿಕರ್, ಶೇಖರಪ್ಪ ಬಡಿಗೇರ, ಬಸವರಾಜ ಕೊಡೆಕಲ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

Advertisement

0 comments:

Post a Comment

 
Top