PLEASE LOGIN TO KANNADANET.COM FOR REGULAR NEWS-UPDATES


  ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಸಂಬಂಧಿಸಿದ ಆಯ್ಕೆ ಪಟ್ಟಿ ಮತ್ತು ಕಾಯ್ದಿರಿಸಿದ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.
ಆಯ್ಕೆ ಪಟ್ಟಿಯನ್ನು ಆಯಾ ಕೇಂದ್ರಗಳಲ್ಲಿ ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್ ನಿಂದ ನೋಡಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಆಯಾ ಕೇಂದ್ರ, ವಿಭಾಗ, ಮಹಾವಿದ್ಯಾಲಯಗಳಲ್ಲಿ ಆ.೧೪ ರೊಳಗಾಗಿ ನಿಗದಿತ ಶುಲ್ಕ ಪಾವತಿಸಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಪ್ರವೇಶಾತಿ ಪಡೆಯಬಹುದು. ನಿಗದಿತ ದಿನಾಂಕದೊಳಗೆ ಪ್ರವೇಶಾತಿ ಪಡೆಯದವರ ಆಯ್ಕೆ ರದ್ದಾಗುತ್ತದೆ.  ಕಾಯ್ದಿರಿಸಿದ ಪಟ್ಟಿಯಲ್ಲಿರುವ ಆಯಾ ಕೇಂದ್ರ, ವಿಭಾಗ, ಮಹಾವಿದ್ಯಾಲಯಗಳಲ್ಲಿ ಆ.೧೭ ರಂದು ಬೆಳಿಗ್ಗೆ ೧೧.೩೦ ರೊಳಗೆ ಹಾಜರಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ನೋಂದಾಯಿತ ಅಭ್ಯರ್ಥಿಗಳಲ್ಲಿ ಅರ್ಹತೆ ಮತ್ತು ಮೀಸಲಾತಿ ಅನುಸಾರ ಲಭ್ಯವಿರುವ ಸ್ಥಾನಗಳಿಗೆ ಪ್ರವೇಶ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ಕೇಂದ್ರ, ವಿಭಾಗ, ಮಹಾವಿದ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.

Advertisement

0 comments:

Post a Comment

 
Top