PLEASE LOGIN TO KANNADANET.COM FOR REGULAR NEWS-UPDATES


ಹೈದ್ರಾಬಾದ್, ಆ.21: ಬೇಲ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿ ಆಂಧ್ರ ಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಮುಂದೆ ಬಿಎಸ್‌ಆರ್ ಕಾಂಗ್ರೆಸ್‌ನ ಸ್ಥಾಪಕ, ಶಾಸಕ ಶ್ರೀರಾಮುಲು ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಹೈದ್ರಾಬಾದ್‌ನಲ್ಲಿರುವ ಎಸಿಬಿ ಕಚೇರಿಗೆ ತೆರಳಿದ ಶ್ರೀರಾಮುಲು, ಎಸಿಬಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
ಜನಾರ್ದನ ರೆಡ್ಡಿ ಬೇಲ್ ಡೀಲ್ ಪ್ರಕರಣದಲ್ಲಿ ಅವರ ಆಪ್ತರಾದ ಶ್ರೀರಾಮುಲು ಹೆಸರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು.
ಬೇಲ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿ ಜನಾರ್ದನ ರೆಡ್ಡಿಯ ಸಹೋದರ ಜಿ.ಸೋಮಶೇಖರ ರೆಡ್ಡಿ ಹಾಗೂ ಶ್ರೀರಾಮುಲುರ ಅಳಿಯ ಎಚ್.ಟಿ.ಸುರೇಶ್ ಬಾಬುರನ್ನು ಎಸಿಬಿ ತಂಡ ಈಗಾಗಲೇ ಬಂಧಿಸಿದೆ.

Advertisement

0 comments:

Post a Comment

 
Top