PLEASE LOGIN TO KANNADANET.COM FOR REGULAR NEWS-UPDATES


 ೬೬ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಆ. ೧೫ ರಂದು ಬೆಳಿಗ್ಗೆ ೯ ಗಂಟೆಗೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ.
       ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು.  ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ವಹಿಸುವರು.  ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಂದು ಬೆಳಿಗ್ಗೆ ೮ ಗಂಟೆಗೆ ಕೊಪ್ಪಳ ತಹಸಿಲ್ದಾರರ ಕಚೇರಿ ಆವರಣದಿಂದ ವಿವಿಧ ಸ್ಥಬ್ಧ ಚಿತ್ರಗಳ ಮೆರವಣಿಗೆ ಹೊರತು ಜಿಲ್ಲಾ ಕ್ರೀಡಾಂಗಣ ತಲುಪಲಿದೆ.  ರಾಷ್ಟ್ರಧ್ವಜಾರೋಹಣದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಸ್ವಾಂತ್ರೋತ್ಸವದ ಸಂದೇಶ ನೀಡುವರು. ನಂತರ ವಿವಿಧ ಶಾಲಾ ಮಕ್ಕಳು, ಪೊಲೀಸ್, ಎನ್.ಸಿ.ಸಿ. ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್, ಗೃಹರಕ್ಷಕ ದಳದವರಿಂದ ಆಕರ್ಷಕ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ಜರುಗುವುದು.  ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಮತ್ತು ಸಲ್ಲಿಸಿದ ಶಾಲಾ ಮಕ್ಕಳಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.  ಸಮಾರಂಭದಲ್ಲಿ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಜಿ.ಪಂ. ಅಧ್ಯಕ್ಷೆ ಜ್ಯೋತಿ ಬಿಲ್ಗಾರ್, ಸಂಸದ ಶಿವರಾಮಗೌಡ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪುರ, ಶಿವರಾಜ್ ಎಸ್ ತಂಗಡಗಿ, ಪರಣ್ಣ ಮುನವಳ್ಳಿ, ಈಶಣ್ಣ ಗುಳಗಣ್ಣವರ್, ಹಾಲಪ್ಪ ಆಚಾರ್, ಶಶಿಲ್ ನಮೋಶಿ, ಜಿ.ಪಂ. ಉಪಾರ್ಧಯಕ್ಷೆ ಡಾ. ಸೀತಾ ಹಲಗೇರಿ, ತಾ.ಪಂ. ಅಧ್ಯಕ್ಷ ನಾಗರಾಜ ಚಲ್ಲೊಳ್ಳಿ, ನಗರಸಭೆ ಅಧ್ಯಕ್ಷ ಸುರೇಶ್ ದೇಸಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎನ್. ಮಂಜುನಾಥ ಪ್ರಸಾದ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ಪ್ರಕಾಶ್ ಅವರೂ ಸಹ ಪಾಲ್ಗೊಳ್ಳುವರು.       ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಂದು ಸಂಜೆ ೬ ಗಂಟೆಗೆ ನಗರದ ಸಾರ್ವಜನಿಕ ಮೈದಾನ ಅಥವಾ ಸಾಹಿತ್ಯ ಭವನದಲ್ಲಿ ಸಮೂಹ ನೃತ್ಯಗಳು, ಭರತನಾಟ್ಯ, ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು, ಸಮೂಹ ಗೀತೆಗಳು ಮುಂತಾದ  ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Advertisement

0 comments:

Post a Comment

 
Top