PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ : ಜ್ಞಾನ ಬಂಧು ಪ್ರಾಥಮಿಕ ಶಾಲೆ ಭಾಗ್ಯನಗರ ಗ್ರಾಮದಲ್ಲಿ ದಿ ೨೯  ರಂದು ಬೆಳಿಗ್ಗೆ ೯:೦೦ ಗಂಟೆಗೆ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಮಾಡುವುದರ ಮೂಲಕ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿಯ ಪೂಜೆಯನ್ನು ನೆರವೇರಿಸಿದ ಶಾಲೆಯ ಮುಖ್ಯೋಪಾಧ್ಯಾಯಿನಿಯಾದ ಜ್ಯೋತಿ. ಎಸ್. ಎಸ್. ರವರು ವಾಲ್ಮೀಕಿ ಮಹರ್ಷಿಯ ಬಗ್ಗೆ & ರಾಮಾಯಣದ ಬಗ್ಗೆ ಕೆಲವು ಮಾತುಗಳನ್ನು ಮಕ್ಕಳಿಗೆ ತಿಳಿಯಪಡಿಸಿದರು. ಸಂಸ್ಥೆಯ ಅಧ್ಯಕ್ಷರಾದ    ದಾನಪ್ಪ.ಜಿ.ಕೆ ರವರು ಎಲ್ಲರಿಗೂ ವಾಲ್ಮೀಕಿ ಜಯಂತಿಯ ಶುಭಾಷಯಗಳನ್ನು ತಿಳಿಸಿದರು. ಶಿಕ್ಷಕಿಯರು & ಮಕ್ಕಳೊಡಗೂಡಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಕ್ಕಳಿಗೆ ಸಿಹಿ ತಿನಸುಗಳನ್ನು ಹಂಚಲಾಯಿತು.

Advertisement

0 comments:

Post a Comment

 
Top