PLEASE LOGIN TO KANNADANET.COM FOR REGULAR NEWS-UPDATES


  ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನ.೦೧ ರಂದು ಬೆಳಿಗ್ಗೆ ೯.೦೦ ಗಂಟೆಗೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.
ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಸಂಸದ ಶಿವರಾಮಗೌಡ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಶಿವರಾಜ ಎಸ್.ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಹಾಲಪ್ಪ ಆಚಾರ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ತಾ.ಪಂ. ಅಧ್ಯಕ್ಷ ದೇವಪ್ಪ ಭರಮಪ್ಪ ಮೇಕಾಳಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ ಅವರು ಭಾಗವಹಿಸುವರು.  ವಿವಿಧ ಕ್ಷೇತ್ರಗಳ ಸಾಧಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಲಿದೆ.
ಮೆರವಣಿಗೆ : ರಾಜ್ಯೋತ್ಸವದ ಅಂಗವಾಗಿ ನಾಡದೇವತೆ ಶ್ರೀ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆಯು ಅಂದು ಬೆಳಿಗ್ಗೆ ೭ ಗಂಟೆಗೆ ಕೊಪ್ಪಳ ತಹಸಿಲ್ದಾರರ ಕಚೇರಿ ಆವರಣದಿಂದ, ಅಶೋಕ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ಕೊಪ್ಪಳ ಜಿಲ್ಲಾ ಕ್ರೀಡಾಂಗಣಕ್ಕೆ ತಲುಪುವುದು. ಅಲ್ಲದೇ ರಾಷ್ಟ್ರ ಧ್ವಜಾರೋಹಣ ಸಂದರ್ಭದಲ್ಲಿ ಪಥ ಸಂಚಲನ ಜರುಗಲಿದ್ದು, ವಿವಿಧ ಶಾಲಾ ಮಕ್ಕಳು, ಪೊಲೀಸ್ ಎನ್.ಸಿ.ಸಿ. ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ , ಗೃಹ ರಕ್ಷಕ ದಳಗಳಿಂದ ಪಥ ಸಂಚಲನ ಮತ್ತು ಗೌರವ ರಕ್ಷೆ ಸ್ವೀಕಾರ ಜರುಗಲಿದೆ.
ಸಾಯಂಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಂದು ಸಾಯಂಕಾಲ ೬ ರಿಂದ ೯ ಗಂಟೆಯವರೆಗೆ ಕೊಪ್ಪಳ ಸಾಹಿತ್ಯ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಸಮೂಹ ನೃತ್ಯಗಳು, ದೇಶಭಕ್ತಿ ಗೀತೆಗಳು, ಭರತ ನಾಟ್ಯ, ಸಮೂಹ ಗೀತೆಗಳು, ಜಾನಪದ ನೃತ್ಯ ಇತ್ಯಾದಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.  

Advertisement

0 comments:

Post a Comment

 
Top