PLEASE LOGIN TO KANNADANET.COM FOR REGULAR NEWS-UPDATES


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಕೊಪ್ಪಳ ಸಾಹಿತ್ಯ ಭವನದಲ್ಲಿ ಅ.೨೯ ರಂದು ಬೆಳಿಗ್ಗೆ ೧೧.೪೫ ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಜರುಗಲಿದೆ.  
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ನೆರವೇರಿಸುವರು. ಕೊಪ್ಪಳ ಶಾಸಕ ಸಂಗಣ್ಣ ಕರಡಿ ಅವರು ಅಧ್ಯಕ್ಷತೆ ವಹಿಸುವರು.  
ಮುಖ್ಯ ಅತಿಥಿಗಳಾಗಿ ಜಿ.ಪಂ.ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ್, ಸಂಸದ ಶಿವರಾಮಗೌಡ, ಶಾಸಕರಾದ ಪರಣ್ಣ ಮುನವಳ್ಳಿ, ಅಮರೇಗೌಡ ಪಾಟೀಲ್ ಬಯ್ಯಾಪುರ, ಶಿವರಾಜ ಎಸ್.ತಂಗಡಗಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಹಾಲಪ್ಪ ಆಚಾರ, ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷೆ ಲಲಿತಾರಾಣಿ ಶ್ರೀರಂಗದೇವರಾಯಲು, ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಜಿ.ಪಂ.ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ತಾ.ಪಂ.ಅಧ್ಯಕ್ಷ ನಾಗರಾಜ ಚಲ್ಲೊಳ್ಳಿ, ನಗರಸಭೆ ಅಧ್ಯಕ್ಷ ಸುರೇಶ ದೇಸಾಯಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಪ್ಪಣ್ಣ ಪದಕಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ ಸೇರಿದಂತೆ ಜಿಲ್ಲೆಯ ಜಿ.ಪಂ.ಸದಸ್ಯರು, ನಗರಸಭೆ ಸದಸ್ಯರು, ಪುರಸಭೆ ಸದಸ್ಯರು, ತಾ.ಪಂ.ಸದಸ್ಯರು ಹಾಗೂ ಗ್ರಾ.ಪಂ.ಸರ್ವ ಸದಸ್ಯರು ಆಗಮಿಸಲಿದ್ದಾರೆ. ಅತಿಥಿ ಉಪನ್ಯಾಸಕರಾಗಿ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ|| ಎಸ್.ಕೆ.ಮೇಟಿ ಅವರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎಸ್.ಹೆಚ್.ಅಂಗಡಿ ಅವರು ತಿಳಿಸಿದ್ದಾರೆ.
ಮೆರವಣಿಗೆ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೯.೦೦ ಗಂಟೆಗೆ ಕೊಪ್ಪಳ ನಗರದ ಶಿರಸಪ್ಪಯ್ಯನಮಠದಿಂದ ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಯು ಕೊಪ್ಪಳ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಸಾಹಿತ್ಯ ಭವನಕ್ಕೆ ಕರೆತರಲಾಗುವುದು.

Advertisement

0 comments:

Post a Comment

 
Top