- ತುಳಸಿ ಮದ್ದಿನೇನಿ
.jpg)
ಭೂಪಾಲ್ ಅನಿಲ ಸೋರಿಕೆ ದುರಂತಹ ಕಹಿ ನೆನಪಿನ ಅಂಗವಾಗಿ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ವತಿಯಿಂದ ತಾಲೂಕಿನ ಗಿಣಿಗೇರಾ ಬಳಿಯ ಹೊಸಪೇಟೆ ಸ್ಟೀಲ್ಸ್ ಲಿಮಿಟೆಡ್ನ ಕಲ್ಯಾಣಿ ಕಾರ್ಖಾನೆಯಲ್ಲಿ ಏರ್ಪಡಿಸಲಾಗಿದ್ದ ರಾಸಾಯನಿಕ ದುರಂತ ತಡೆಗಟ್ಟುವ ದಿನಾಚರಣೆ ಹಾಗೂ ವಿಪತ್ತು ನಿರ್ವಹಣಾ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯಲ್ಲಿ ಅನೇಕ ಬೃಹತ್ ಪ್ರಮಾಣದ ಕಾರ್ಖಾನೆಗಳಿದ್ದು, ಎಲ್ಲಾ ಕಾರ್ಖಾನೆಗಳು ಸಂಭವನೀಯ ರಾಸಾಯನಿಕ ಸೋರಿಕೆ ಅಥವಾ ಬೆಂಕಿ ಅವಘಡದಂತಹ ದುರಂತಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು. ಇದಕ್ಕಾಗಿ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡುವುದಲ್ಲದೆ, ಅಗತ್ಯ ಉಪಕರಣಗಳನ್ನು ಸರಿಯಾಗಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ಕಾರ್ಖಾನೆಗಳಲ್ಲಿ ಯಾವುದೇ ದುರಂತ ಸಂಭವಿಸದಂತೆ, ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕಾರ್ಖಾನೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ದುರಂತ ಸಂಭವಿಸಿದಾಗ ಕೈಗೊಳ್ಳುವ ನಿರ್ವಹಣಾ ಕ್ರಮಗಳ ಅಣಕು ಪ್ರದರ್ಶನ ವೀಕ್ಷಿಸಿದ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು, ದುರಂತಗಳ ನಿರ್ವಹಣೆಗೆ ಕಾರ್ಖಾನೆಗಳು ಅನುಸರಿಸುವ ನಿವಾರಣಾ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

0 comments:
Post a Comment