PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಡಿ: ಕೊಪ್ಪಳ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ ವಿ. ಮೂಡ್ಲಯ್ಯ ಸೋಮವಾರ ಅಧಿಕಾರ ವಹಿಸಿಕೊಂಡರು.
ಈ ಮೊದಲು ಬಳ್ಳಾರಿ ಜಿಲ್ಲೆಯ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಿನ್ಸಿಪಾಲರಾಗಿ ಸೇವೆ ಸಲ್ಲಿಸಿರುವ ಅವರು ಅತಿ ಹಿಂದುಳಿದ ಕೊಪ್ಪಳ ಜಿಲ್ಲೆಯಲ್ಲಿ ತಮ್ಮ ಆಡಳಿತಾವಧಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಹಾಗೂ ಜಿಲ್ಲೆಯ ಶೈಕ್ಷಣಿಕ ಉನ್ನತಿಗಾಗಿ ಸಮರ್ಪಣಾಭಾವದಿಂದ ತಾವು ಮತ್ತು ತಮ್ಮ ಉಪನ್ಯಾಸಕ ವೃಂದವು ಶ್ರಮಿಸುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಭಾರಿ ಉಪನಿರ್ದೇಶಕರಾಗಿದ್ದ ಸಿ.ವಿ. ಜಡಿಯವರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement

0 comments:

Post a Comment

 
Top