PLEASE LOGIN TO KANNADANET.COM FOR REGULAR NEWS-UPDATES


  ಕೊಪ್ಪಳ ನಗರದ ಜವಾಹರ ರಸ್ತೆಯಲ್ಲಿ ಸುಗಮ ಸಂಚಾರಕ್ಕಾಗಿ ಆಜಾದ್ ಸರ್ಕಲ್‌ನಿಂದ ಗಡಿಯಾರ ಕಂಬದವರೆಗೆ ಏಕಮುಖ ರಸ್ತೆ ಸಂಚಾರದ ವ್ಯವಸ್ಥೆ ಫೆ. ೨೫ ರಿಂದ ಜಾರಿಗೆ ಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಅವರು ತಿಳಿಸಿದ್ದಾರೆ.
  ಕೊಪ್ಪಳ ನಗರದ ಪ್ರಮುಖ ವಾಣಿಜ್ಯ ರಸ್ತೆಯಾಗಿರುವ ಜವಾಹರ ರಸ್ತೆಯಲ್ಲಿ ಸಂಚಾರ ದಟ್ಟಣೆಯಿಂದಾಗಿ ಉಂಟಾಗುತ್ತಿದ್ದ ತೊಂದರೆಯನ್ನು ಪರಿಗಣಿಸಿ, ಇದೀಗ ಆಜಾದ್ ಸರ್ಕಲ್‌ನಿಂದ ಗಡಿಯಾರ ಕಂಬದವರೆಗೆ ಏಕಮುಖ ರಸ್ತೆ ಸಂಚಾರ ವ್ಯವಸ್ಥೆಯನ್ನು ಫೆ. ೨೫ ರಿಂದ ಜಾರಿಗೆ ತರಲಾಗುವುದು.  ಸುಗಮ ಸಂಚಾರಕ್ಕಾಗಿ ಸಾರ್ವಜನಿಕರು ಈ ನೂತನ ಸಂಚಾರ ವ್ಯವಸ್ಥೆಗೆ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ ಹಾಗೂ ಸಂಚಾರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ ರವಿ ಪುರುಷೋತ್ತಮ  ಮನವಿ ಮಾಡಿದ್ದಾರೆ



Advertisement

0 comments:

Post a Comment

 
Top