PLEASE LOGIN TO KANNADANET.COM FOR REGULAR NEWS-UPDATES


 ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯಿಂದ ೬ನೇ ಆರ್ಥಿಕ ಗಣತಿ (೨೦೧೨-೧೩) ನಗರ ಮತ್ತು ಗ್ರಾಮೀಣ ಪ್ರದೇಶದ ಚಾರ್ಜ ಅಧಿಕಾರಿಗಳಿಗೆ ಹಾಗೂ ಮಾಸ್ಟರ್ ತರಬೇತಿದಾರರಿಗೆ ತರಬೇತಿ ಕಾರ್ಯಾಗಾರವನ್ನು ಮೇ.೨೧ ರಿಂದ ಮೇ.೨೨ ರವರೆಗೆ ಜಿ.ಪಂ.ಸಭಾಂಗಣದಲ್ಲಿ ಬೆಳಿಗ್ಗೆ ೧೦.೦೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಾಗಾರದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಿ.ಕೆ.ರವಿ, ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ.ಮುಖ್ಯ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ, ಸಹಾಯಕ ಆಯುಕ್ತ ಶರಣಬಸಪ್ಪ ಅವರು ಆಗಮಿಸಲಿದ್ದಾರೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ತಿಳಿಸಿದ್ದಾರೆ.

Advertisement

0 comments:

Post a Comment

 
Top