PLEASE LOGIN TO KANNADANET.COM FOR REGULAR NEWS-UPDATES

  ಜಿಲ್ಲೆಯಲ್ಲಿ ಗೃಹಕೃತ್ಯದಲ್ಲಿ (ಮನೆಗೆಲಸ) ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಹಾಗೂ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನ ಜಾರಿಗೊಳಿಸಲು ಆದೇಶವಿದ್ದು, ಈ ಆದೇಶದನ್ವಯ ಗೃಹಕೃತ್ಯ (ಮನೆಗೆಲಸ) ದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರು ನೇರವಾಗಿ ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇವರನ್ನು ಸಂಪರ್ಕಿಸಿ ನೋಂದಣಿ ಮಾಡಿಸಿಕೊಳ್ಳುವುದರ ಮುಖಾಂತರ ಕಾಯ್ದೆಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ   ಕಾರ್ಮಿಕ ಅಧಿಕಾರಿಗಳು   ತಿಳಿಸಿದ್ದಾರೆ.

Advertisement

0 comments:

Post a Comment

 
Top