PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ: ನಗರದ ಸಾಹಿತ್ಯ ಭವನದಲ್ಲಿ ಆಗಸ್ಟ್ ೨೫ರಂದು ನಡೆಯಲಿರುವ ಕೊಪ್ಪಳ ಜಿಲ್ಲಾ ೫ನೇ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೊಪ್ಪಳ ಗವಿಸಿದ್ದೇಶ್ವರ ಪ್ರೌಢ ಶಾಲೆಯ ನಿವೃತ ಮುಖ್ಯೋಪಾಧ್ಯಾಯರು ಹಾಗೂ ಹಿರಿಯ ಸಾಹಿತಿಗಳಾದ ಎಂ.ಎಸ್.ಸವದತ್ತಿಯವರನ್ನು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿಯವರು ಸಮ್ಮೇಳನಕ್ಕೆ ಅಧಿಕೃತವಾಗಿ ಆಹ್ವಾನಿಸಿದರು.
      ಈ ಸಂದರ್ಭದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯಧ್ಯಕ್ಷರಾದ ಡಾ.ಮಹಾಂತೇಶ ಮಲ್ಲನಗೌಡರ,ಪತ್ರಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಮಹೇಶಬಾಬು ಸುರ್ವೆ,ಕೊಪ್ಪಳ ಜಿಲ್ಲಾ ನಾಗರಿಕ ವೇದಿಕೆಯ ಅಧ್ಯಕ್ಷರಾದ ಎಂ.ಸಾಧಿಕಲಿ,ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ ಹಳ್ಳಿಕೇರಿ,ಹಿರಿಯ ಸಾಹಿತಿಗಳಾದ ಈಶ್ವರ ಹತ್ತಿ,ವೀರಕನ್ನಡಿಗ ಯುವಕ ಸಂಘದ ಅಧ್ಯಕ್ಷರಾದ ಶಿವಾನಂದ ಹೊದ್ಲೂರ,ಪತ್ರಕರ್ತರಾದ ಪರಮಾನಂದ ಯಾಳಗಿ,ಎನ್.ಎಂ.ದೊಡ್ಡಮನಿ,ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾಯರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ರಾಜ್ಯ ಸಂಚಾಲಕರಾದ ಭರಮಪ್ಪ ಕಟ್ಟಮನಿ,ಶಿಕ್ಷಕರಾದ ನಜೀರಹ್ಮದ ಮುಂತಾದವರು ಹಾಜರಿದ್ದರು.

Advertisement

0 comments:

Post a Comment

 
Top