PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ :  ಬೆಂಗಳೂರಿನಲ್ಲಿ ದಿ. ೧೧ರಂದು ನಡೆದ ಉತ್ತರ ಕರ್ನಾಟಕ ಉತ್ಸವ ೨೦೧೩ರ ಕಾರ್‍ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಹಿರಿಯ ಸಾಹಿತಿ, ಹೋರಾಟಗಾರ ವಿಠ್ಠಪ್ಪ ಗೋರಂಟ್ಲಿಯವರಿಗೆ ಚಾಲುಕ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಒಟ್ಟು ಹದಿಮೂರು ಜನ ಸಾಧಕರಿಗೆ ಈ ಪ್ರಶಸ್ತಿಯನ್ನು ನೀಡಲಾಯಿತು. ಗ್ರಾಮೀಣಾಭಿವೃದ್ದಿ ಸಚಿವ ಎಚ್.ಕೆ.ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು. 





ಸಮಾರಂಭದಲ್ಲಿ ವೀರಣ್ಣ ಮತ್ತಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉತ್ತರ ಕರ್ನಾಟಕ ಅಭಿವೃದ್ದಿ ಸಂಘದ ಅಧ್ಯಕ್ಷ ಡಾ.ಚಂದ್ರಶೇಖರ ಸಾಂಭ್ರಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು. 


Advertisement

0 comments:

Post a Comment

 
Top