PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ:ಸರ್ಕಾರದ ಇಲಾಖೆ,ಸಂಸ್ಥೆ ಹಾಗೂ ಸರಕಾರಿ ಸ್ವಾಮ್ಯದ ಕಂಪನಿಗಳ ಉದ್ಯೋಗಾವಕಾಶಗಳಲ್ಲಿ ದೈಹಿಕ ಅಸಮರ್ಥರಿಗೆ ಶೇ.೩ರಷ್ಟು ಮೀಸಲಾತಿ ಕಲ್ಪಿಸುವಂತೆ ಸುಪ್ರಿಂಕೋರ್ಟ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚಿಸಿರುವ ಕ್ರಮವನ್ನು ರಾಜ್ಯ ಸರ್ಕಾರಿ ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ ಸ್ವಾಗತಿಸಿದ್ದಾರೆ.
        ಈಗಾಗಲೇ ಈ ನಿಯಮ ಜಾರಿಯಲ್ಲಿದ್ದರೂ ಕೂಡಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರಿಯಾದ ರೀತಿಯಲ್ಲಿ ನಿಯಮವನ್ನು ಪಾಲಿಸದೆ ಅಂಗವಿಕಲರು ಅನೇಕ ಉದ್ಯೋಗಗಳಿಂದ ವಂಚಿತರಾಗಿದ್ದಾರೆ.ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರಿಯಾದ ರೀತಿಯಲ್ಲಿ ಅನುಷ್ಟಾನಕ್ಕೆ ತಂದು ಅಂಗವಿಕಲರಿಗೆ ಉದ್ಯೋಗ ನೀಡುವತ್ತಾ ಕಾರ್ಯನಿರ್ವಹಿಸಲಿ ಎಂದು ತಿಳಿಸಿದರು.

Advertisement

0 comments:

Post a Comment

 
Top