PLEASE LOGIN TO KANNADANET.COM FOR REGULAR NEWS-UPDATES

  ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ವಾರ್ಡ್ ನಂ.೧೨ ರಲ್ಲಿ ರಸ್ತೆಯ ಎರಡು ಬದಿಯಲ್ಲಿರುವ ಅನಧಿಕೃತ ಕಟ್ಟಡಗಳನ್ನು ಏಳು ದಿನಗಳ ಒಳಗಾಗಿ ತೆರವುಗೊಳಿಸಬೇಕು ಎಂದು ನಗರಸಭೆಯ ಪೌರಾಯುಕ್ತರು ಸೂಚನೆ ನೀಡಿದ್ದಾರೆ.
  ವಾರ್ಡ್ ಸಂ. ೧೨ ರಲ್ಲಿ ಜಗಜೀವನರಾಮ್ ವೃತ್ತದಿಂದ ಗವಿಮಠದ ಕಂಪೌಂಡ್‌ವರೆಗೆ ೨೦೧೨-೧೩ನೇ ಸಾಲಿನ ಎಸ್.ಎಫ್.ಸಿ. ಶೇ.೨೨.೭೫% ರ ಅನುದಾನದ ಅಡಿಯಲ್ಲಿ ರಸ್ತೆಯ ಎರಡು ಬದಿಯಲ್ಲಿರುವ ಅನಧಿಕೃತ ಕಟ್ಟಡಗಳನ್ನು ೭ ದಿನಗಳ ಒಳಗಾಗಿ ತೆರವುಗೊಳಿಸಬೇಕು.
ಈ ಎರಡು ರಸ್ತೆಯ ಬದಿಯಲ್ಲಿ ಆರ್.ಸಿ.ಸಿ. ಚರಂಡಿ ನಿರ್ಮಾಣ ಹಾಗೂ ಸ್ಲ್ಯಾಬ್ ಅಳವಡಿಸುವ ಕಾಮಗಾರಿಯನ್ನು ನಿರ್ವಹಿಸಬೇಕಾಗಿದ್ದು, ಈ ರಸ್ತೆಗೆ ಹೊಂದಿಕೊಂಡಿರುವ ಆಸ್ತಿ ಮಾಲೀಕರಿಗೆ ಈಗಾಗಲೇ ನಗರಸಭೆಯಿಂದ ನೋಟಿಸ್ ಜಾರಿ ಮಾಡಲಾಗಿದೆ.  ಅಲ್ಲದೆ  ಮೌಖಿಕವಾಗಿ ಕಟ್ಟಡ ತೆರವುಗೊಳಿಸಲು ತಿಳಿಸಲಾಗಿದ್ದು, ಇದುವರೆಗೂ ಕಟ್ಟಡಗಳನ್ನು ತೆರವು ಮಾಡಿಕೊಂಡಿಲ್ಲ.  ಈ ಕಾಮಗಾರಿಗೆ ಎರಡು ಬದಿ ಹೊಂದಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸುವುದು ಅಗತ್ಯವಾಗಿದ್ದು, ತಪ್ಪಿದಲ್ಲಿ, ನಗರಸಭೆಯಿಂದಲೇ ತೆರವುಗೊಳಿಸಿ ಅದಕ್ಕೆ ತಗಲುವ ವೆಚ್ಚವನ್ನು ಸಂಬಂಧಪಟ್ಟವರ ಆಸ್ತಿ ತೆರಿಗೆಯಲ್ಲಿ ಸೇರಿಸಿ ವಸೂಲಿ ಮಾಡಲಾಗುವುದು ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತ ರುದ್ರಮುನಿ ಅವರು ಎಚ್ಚರಿಕೆ ನೀಡಿದ್ದಾರೆ.

Advertisement

0 comments:

Post a Comment

 
Top