ಕಾಂಗ್ರೆಸ್ ಸರಕಾರ ಕಳೆದ 10 ವರ್ಷಗಳಿಂದ ದೇಶವನ್ನು ಲೂಟಿ ಮಾಡುತ್ತಿದೆ. ಈ ಸರಕಾರಕ್ಕೆ ಬ
ಡವರು,ರೈತರು, ನಿರುದ್ಯೋಗಿಗಳು ಹಾಗೂ ಯುವಕರ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಜೈ ಜವಾನ್ ಜೈ ಕಿಸಾನ್ ಗೆ ಬದಲಿ ಮರ್ ಜವಾನ್ ಮರ್ ಕಿಸಾನ್ ಎನ್ನುವ ಘೋಷಣೆ ಮೊಳಗಿಸುತ್ತಿದೆ ಎಂದು ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಹೇಳಿದರು. ಅವರು ಕೊಪ್ಪಳದ ಹೊರಭಾಗದಲ್ಲಿ ಬಿಜೆಪಿ ಪಕ್ಷವು ಹಮ್ಮಿಕೊಂಡಿದ್ದ ಭಾರತ್ ವಿಜಯ ರ್ಯಾಲಿಯಲ್ಲಿ ಮಾತನಾಡುತ್ತಿದ್ದರು.
ವೇದಿಕೆಯ ಮೇಲೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಂಸದ ಶಿವರಾಮೇಗೌಡ, ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ, ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ವಿಧಾನ ಪರಿಷತ್ ಸದಸ್ಯ ಹಾಲಪ್ಪ ಆಚಾರ್, ಕುಷ್ಟಗಿಯ ಶಾಸಕ ದೊಡ್ಡನಗೌಡ, ಬಸವರಾಜ್ ದಡೇಸೂಗೂರ, ಮಾಜಿ ಸಚಿವ ಶ್ರೀರಾಮುಲು,ಡಾ.ಕೆ.ಜಿ.ಕುಲಕರ್ಣಿ, ಬಳ್ಳಾರಿಯ ಮಾಜಿ ಶಾಸಕ ಸೋಮಲಿಂಗಪ್ಪ, ಗಂಗಾವತಿಯ ಮಾಜಿ ಶಾಸಕ ಪರಣ್ಣ ಮುನವಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಕ್ಕಪಕ್ಕದ ಜಿಲ್ಲೆಗಳಿಂದಲೂ ಅಭಿಮಾನಿಗಳು ಬಂದಿದ್ದರಿಂದ ಸಮಾವೇಶದಲ್ಲಿ ಜನಸಾಗರವೇ ಇತ್ತು.




0 comments:
Post a Comment