PLEASE LOGIN TO KANNADANET.COM FOR REGULAR NEWS-UPDATES

 ಕರ್ನಾಟಕ ಜಾನಪದ ಅಕಾಡೆಮಿಯು ೨೦೧೩ ನೇ ವರ್ಷದಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ವಿವಿಧ ಪ್ರಕಾರಗಳ ಜಾನಪದ ಕೃತಿಗಳಿಗೆ ಪುಸ್ತಕ ಬಹುಮಾನ ಯೋಜನೆಗಾಗಿ ಕೃತಿಗಳನ್ನು ಆಹ್ವಾನಿಸಿದೆ.
  ಪ್ರಥಮ ಆವೃತ್ತಿಯಲ್ಲಿ ೨೦೧೩ ರ ಜನವರಿ ೦೧ ರಿಂದ ಡಿಸೆಂಬರ್ ೩೧ ರವರೆಗಿನ ಅವಧಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ ೧೫೦ ಪುಟಗಳ ಮಿತಿಯಲ್ಲಿರುವ ಜಾನಪದ ಗದ್ಯ, ಪದ್ಯ, ವಿಚಾರ-ವಿಮರ್ಶೆ, ಸಂಶೋಧನೆ ಹಾಗೂ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ೨೦೧೩ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಆಹ್ವಾನಿಸಿದೆ.  ಲೇಖಕರು/ಪ್ರಕಾಶಕರು/ಸಂಪಾದಕರು ತಮ್ಮ ಕೃತಿಯ ನಾಲ್ಕು ಪ್ರತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ೨ನೇ ಮಹಡಿ, ಕನ್ನಡ ಭವನ, ಜೆಸಿ ರಸ್ತೆ, ಬೆಂಗಳೂರು-೦೨ ಇವರಿಗೆ ಏಪ್ರಿಲ್ ೩೦ ರ ಒಳಗಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೦-೨೨೨೧೫೫೦೯ ಕ್ಕೆ ಸಂಪರ್ಕಿಸುವಂತೆ ತಿಳಿಸಿದೆ.

Advertisement

0 comments:

Post a Comment

 
Top