PLEASE LOGIN TO KANNADANET.COM FOR REGULAR NEWS-UPDATES

ಕಾಂಗ್ರೆಸ್,ಬಿಜೆಪಿ ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳು
ಕೊಪ್ಪಳ,ಏ.೧೦:ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ, ಅಧಿಕಾರಕ್ಕೆ ಬಂದು ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಈ ದೇಶದ ಅಭಿವೃದ್ಧಿ ಅಸಾಧ್ಯ. ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವ ಈ ಎರಡು ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ಕೆ.ಎಂ.ರಂಗನಾಥರೆಡ್ಡಿ ಲೇವಡಿ ಮಾಡಿದ್ದಾರೆ.
ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿ ಮತಯಾಚನೆ ಮಾಡಿದ ನಂತರ ಮಾತನಾಡಿದ ಅವರು, ಈ ದೇಶವನ್ನು ಈ ಎರಡು ರಾಷ್ಟ್ರೀಯ ಪಕ್ಷಗಳು ಆಳಿವೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯ, ಅಧಿಕಾರಕ್ಕೆ ಬರುವ ಮುನ್ನ ಚುನಾವಣೆಯ ಪ್ರಣಾಳಿಕೆಯಲ್ಲಿ ಹತ್ತು ಹಲವು ಭರವಸೆಗಳನ್ನು ನೀಡಿ ಗೆದ್ದು ಬರುವ ಈ ಪಕ್ಷಗಳು, ನಂತರ ಕೋಟಿ ಕೋಟಿ ಹಣವನ್ನು ಲೂಟಿ ಮಾಡಿ ಭ್ರಷ್ಟಾಚಾರದಲ್ಲಿ ತೊಡಗುತ್ತವೆ. ಜನರ ಸಮಸ್ಯೆಯನ್ನು ಮರೆತು ಸ್ವಾರ್ಥಕ್ಕಾಗಿ ಹೋರಾಟ ಮಾಡುವ ಇಂಥ ಪಕ್ಷಗಳನ್ನು ಅಧಿಕಾರದಿಂದ ದೂರವಿಡಬೇಕು.
 ಮುಂಬರುವ ದಿನಗಳಲ್ಲಿ ಈ ದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಧೂಳೀಪಟವಾಗಲಿದ್ದು ಕೇಂದ್ರದಲ್ಲಿ ತೃತೀಯರಂಗ ಅಧಿಕಾರಕ್ಕೆ ಬರುತ್ತದೆ. ಆದ್ದರಿಂದ ಈ ಸಾರೆ ಕೊಪ್ಪಳ ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನನಗೆ ಕ್ಷೇತ್ರದ ಜನರು ಆಶೀರ್ವಾದ ಮಾಡಬೇಕು. ಮುಂದೆ ನಾನು ಸಂಸದನಾಗಿ ಆಯ್ಕೆಯಾದರೆ, ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು. ಇದೇ ವೇಳೆ ಭಾಗ್ಯನಗರದ ವಿವಿಧ ವಾರ್ಡುಗಳಲ್ಲಿ ಮನೆ ಮನೆಗೆ ತೆರಳಿಸಿ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ  ಪಕ್ಷದ .ರಾಜ್ಯ ಸಂಚಾಲಕ ಮೋಹನ್, ಕೆ.ವಿ.ಮಹೇಶ, ವೀಕ್ಷಕ ಸುನೀಲಕುಮಾರ,ಮುಖಂಡರಾದ ಜಯತೀರ್ತ ಉಪಸ್ಥಿತರಿದ್ದರು.

Advertisement

0 comments:

Post a Comment

 
Top