ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕೆ ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮಕ್ಕೆ ದಿನಾಂಕ ೧೦/೦೪/೨೦೧೪ ರಂದು ಮಧ್ಯಾಹ್ನ ೩-೦೦ ಗಂಟೆಗೆ ಮಾಜಿ ವಿಧಾನ ಪರಿಷತ್ ಹಾಗೂ ಕೈಮಗ್ಗದ ನಿಗಮದ ಮಾಜಿ ಅಧ್ಯಕ್ಷರು ಎಮ್.ಡಿ ಲಕ್ಷ್ಮೀನಾರಾಯಣ ಅವರು ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ಮಾಡುವರು.
ಈ ಸಭೆಗೆ ಎಲ್ಲಾ ಚುನಾಯಿತ ಪ್ರತಿನಿಧಿಗಳು ಪಕ್ಷದ ಮುಖಂಡರು ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಭಾಗವಹಿಸಿ ಚುನಾವಣಾ ಪ್ರಚಾರ ಸಭೆಯನ್ನು ಯಶಸ್ಚಿಗೊಳಿಸಬೇಕೆಂದು ಪಕ್ಷದ ವಕ್ತಾರ ಅಕ್ಬರ ಪಾಷಾ ಪಲ್ಟನ್ ಕೋರಿದ್ದಾರೆ
0 comments:
Post a Comment