ಕೊಪ್ಪಳ ಜಿಲ್ಲೆಯಾದ್ಯಂತ ಏ. ೧೫ ರ ಸಾಯಂಕಾಲ ೬.೦೦ ಗಂಟೆಯಿಂದ ಏ. ೧೭ ರ ಸಂಜೆ ೬.೦೦ ಗಂಟೆಯವರೆಗೆ ಎಲ್ಲಾ ವೈನ್ಶಾಪ್, ಬಾರಗಳು, ಸಗಟು ಮತ್ತು ಚಿಲ್ಲರೆ ಮಧ್ಯ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧವಾಗಿ ಅಬಕಾರಿ ಉಪ ಆಯುಕ್ತರ ಮುಖಂಡತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಜಾರಿಗೆತರುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಚುನಾವಣೆ : ಸಂತೆ-ಜಾತ್ರೆಗಳ ಮುಂದೂಡಿಕೆ
: ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ಯ ಏ. ೧೭ ರಂದು ಮತದಾನ ನಡೆಯಲಿದ್ದು, ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಅಂದು ಜಿಲ್ಲೆಯಲ್ಲಿ ನಡೆಯುವ ಎಲ್ಲ ಸಂತೆ-ಜಾತ್ರೆಗಳನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್ ಅವರು ತಿಳಿಸಿದ್ದಾರೆ.
0 comments:
Post a Comment