PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ: ಸಂಸ್ಥಾನ ಶ್ರೀಗವಿಮಠದಲ್ಲಿ ದಿನಾಂಕ ೩೦-೦೫-೨೦೧೪ ರಂದು ಶುಕ್ರವಾರ ಬೆಳಿಗ್ಗೆ ೯.೨೫ ಗಂಟೆಯಿಂದ ೧೧.೩೦ ರವರೆಗೆ ಶ್ರೀಮ.ನಿ.ಪ್ರ.ಜ.ಗವಿಸಿದ್ಧೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ  ಹೊಸದಾಗಿ ಶಾಲೆಗೆ ಸೇರುವ  ಮಕ್ಕಳಿಗೆ ಅಕ್ಷರಾಭ್ಯಾಸ ಪ್ರಾರಂಭ ಮಾಡಿಸುವಂತಹ  ವಿನೂತನ ಕಾರ್ಯಕ್ರಮ ಶ್ರೀ ಗವಿಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಿತು.   
                    ಅಂದು ಪೂಜ್ಯರ ಸಾನಿಧ್ಯದಲ್ಲಿ ಶ್ರೀಗಣಪತಿ ಹಾಗೂ ಮಹಾಸರಸ್ವತಿ ಪೂಜೆಯೊಂದಿಗೆ ಈ ಕಾರ್ಯಕ್ರಮ ಆರಂಭವಾಗಿ ಕೊಪ್ಪಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪಾಲಕರು ಹೊಸದಾಗಿ ಶಾಲೆಗೆ ಸೇರಿಸುವ ಮುಂಚಿತವಾಗಿ ತಮ್ಮ ಮಕ್ಕಳನ್ನು ಶ್ರೀಗವಿಮಠಕ್ಕೆ ಕರೆತಂದು ಶ್ರೀಗವಿಸಿದ್ಧೇಶ್ವರ ಮಹಾಸ್ವಾಮಿಗಳ  ಸಾನಿಧ್ಯದಲ್ಲಿ  ಅಕ್ಷರಾಭ್ಯಾಸ  ಪ್ರಾರಂಭ ಮಾಡಿಸಿದರು. ಈ ಕಾರ್ಯಕ್ರಮಕ್ಕೆ  ಹೆಚ್ಚು  ಹೆಚ್ಚು ಪಾಲಕರು ತಮ್ಮ ಮಕ್ಕಳನ್ನು ಕರೆದುಕೊಂಡು  ಬರುವದರ ಮೂಲಕ  ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.. 

Advertisement

0 comments:

Post a Comment

 
Top