PLEASE LOGIN TO KANNADANET.COM FOR REGULAR NEWS-UPDATES

 ಕೊಪ್ಪಳ ಜಿಲ್ಲಾ ೬ನೇ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾದ ಈಶ್ವರ ಹತ್ತಿ ಅವರಿಗೆ ಅಧಿಕೃತ ಆಹ್ವಾನ 
ಕೊಪ್ಪಳ : ಆಗಷ್ಟ ೨೫ ರಂದು ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆಯಲಿರುವ ಕೊಪ್ಪಳ ಜಿಲ್ಲಾ ೬ ನೇ ಚುಟುಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಈಶ್ವರ ಹತ್ತಿ ಇವರನ್ನು ಜುಲೈ ೨೭ ರಂದು ರವಿವಾರ ಬೆಳಗ್ಗೆ ೯ ಗಂಟೆಗೆ ಕೊಪ್ಪಳದ ಇಂದ್ರಕೀಲ ನಗರದಲ್ಲಿರುವ  ಅವರ ನಿವಾಸದಲ್ಲಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ  ಅಧ್ಯಕ್ಷರಾದ  ಹನುಮಂತಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. 
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಾಹಿತಿಗಳು ಆಗಮಿಸಬೇಕೆಂದು ಹನುಮಂತಪ್ಪ ಅಂಡಗಿ ಚಿಲವಾಡಗಿ ವಿನಂತಿಸಿಕೊಂಡಿದ್ದಾರೆ. 

Advertisement

0 comments:

Post a Comment

 
Top