PLEASE LOGIN TO KANNADANET.COM FOR REGULAR NEWS-UPDATES

 ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಿಂದ ಜಿಲ್ಲೆಯಲ್ಲಿ ಮತ್ತು ತಾಲ್ಲೂಕಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುವ ಸಲುವಾಗಿ ವಿವಿಧೆಡೆ ಕೌಂಟರ್‍ಗಳನ್ನು ತೆರೆಯಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಗಂಗಾವತಿ, ಕೊಪ್ಪಳ, ಅಳವಂಡಿ, ಕನಕಗಿರಿ, ಕುಷ್ಟಗಿ, ತಾವರಗೇರಾ, ಹನುಮನಾಳ, ಹನುಮಸಾಗರ, ಯಲಬುರ್ಗಾ, ಕುಕನೂರ ಹಾಗೂ ತಳಕಲ್ ಈ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಕೌಂಟರ್‍ಗಳನ್ನು ತೆರೆಯಲಾಗಿದೆ. ಸಂಬಂಧಿಸಿದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು  ತಿಳಿಸಿದ್ದಾರೆ.

Advertisement

0 comments:

Post a Comment

 
Top