ಶೈಕ್ಷಣಿಕವಾಗಿ ಹಿಂದುಳಿದ ಕೊಪ್ಪಳ ಜಿಲ್ಲೆಯಲ್ಲಿ ಹಾಸ್ಟೆಲ್ಗಳಿಗೆ ನಿವೇಶನ, ಬಡ ಕಸುಬುದಾರರಿಗೆ ಕಲ್ಲು ಗಣಿಗಾರಿಕೆಗೆ ಅನುಮತಿ, ಪ್ರವಾಸೋದ್ಯಮ ಅಭಿವೃದ್ಧಿಗೆ ರೂಪುರೇಷೆ, ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲವು ವಸತಿ ಸಮಸ್ಯೆಗೆ ಪರಿಹಾರ ಇವು ತಮ್ಮ ಕಳೆದ 11 ತಿಂಗಳು ಜಿಲ್ಲೆಯಲ್ಲಿನ ಸೇವೆಯಲ್ಲಿ ಕೈಗೊಂಡ ಪ್ರಮುಖ ಕಾರ್ಯಗಳಾಗಿದ್ದು, ಜಿಲ್ಲೆಯಲ್ಲಿನ ಸೇವೆ ತೃಪ್ತಿ ತಂದಿದೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಕೆ.ಪಿ. ಮೋಹನ್ರಾಜ್ ಅವರು ಹೇಳಿದರು.
ಕೆ.ಪಿ. ಮೋಹನ್ರಾಜ್ ಅವರು ಕರ್ನಾಟಕ ರಾಜ್ಯ ಆಹಾರ
ಮತ್ತು ನಾಗರೀಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆಗೊಂಡ ನಿಮಿತ್ಯ ಜಿಲ್ಲಾ
ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೀಳ್ಕೊಡುಗೆ ಹೃದಯಸ್ಪರ್ಶಿ ಸಮಾರಂಭದಲ್ಲಿ ಅವರು ಮಾತನಾಡಿದರು.
.jpg)
ಜಿಲ್ಲಾಧಿಕಾರಿಗಳ ಹೆಚ್ಚುವರಿ ಪ್ರಭಾರ ವಹಿಸಿಕೊಂಡ
ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ನೇರ ನಡೆ-ನುಡಿ ಹೊಂದಿದ್ದ
ಕೆ.ಪಿ. ಮೋಹನ್ರಾಜ್ ಅವರು ಜನ ಸಮೂಹವನ್ನು ಜೊತೆ, ಜೊತೆಗೆ ತೆಗೆದುಕೊಂಡು ಹೋಗುತ್ತಿದ್ದ ಒಳ್ಳೆಯ
ಸ್ನೇಹಜೀವಿ. ಲೋಕಸಭಾ ಚುನಾವಣೆಯನ್ನು ಜಿಲ್ಲೆಗೆ ಯಾವುದೇ ಕಪ್ಪುಚುಕ್ಕೆ ಬಾರದ ರೀತಿಯಲ್ಲಿ ಸಮರ್ಥವಾಗಿ
ಸಮರ್ಪಕವಾಗಿ ನಡೆಸಲು ಶ್ರಮಿಸಿದರು. ಜಿಲ್ಲೆಯಲ್ಲಿ
ಹಲವಾರು ಅಭಿವೃದ್ಧಿಪರ ಕಾರ್ಯ ನಿರ್ವಹಿಸಿ ಜಿಲ್ಲೆಗೆ ಒಳ್ಳೆಯ ಆಡಳಿತ ಕೊಟ್ಟಿದ್ದರಲ್ಲದೆ ಜನಾನುರಾಗಿಗಳಾಗಿದ್ದರು ಎಂದು ಹೇಳಿದರು.
ಜಿಲ್ಲಾ ಪಂಚಾಯತಿ
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಉದಪುಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೆ.ಪಿ.
ಮೋಹನ್ರಾಜ್ ಅವರು ಕೊಪ್ಪಳ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ವೇಗ ಒದಗಿಸಿದರಲ್ಲದೆ, ಜನಸಾಮಾನ್ಯರ ಸಮಸ್ಯೆಗಳಿಗೆ
ಅವರು ಸ್ಪಂದಿಸುತ್ತಿದ್ದ ಬಗೆ ಎಲ್ಲರಿಗೂ ಅನುಕರಣೀಯ ಎಂದರು.
ಸಹಕಾರ ಇಲಾಖೆ
ಉಪನಿಬಂಧಕ ಮುನಿಯಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಬಿಸಿಎಂ
ಜಿಲ್ಲಾ ಅಧಿಕಾರಿ ಕಲ್ಲೇಶ್ ಮುಂತಾದವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕೆ.ಪಿ. ಮೋಹನ್ರಾಜ್ ಅವರಿಗೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ, ಭಾರ ಹೃದಯದಿಂದ ಬೀಳ್ಕೊಡಲಾಯಿತು.
0 comments:
Post a Comment