ನವದೆಹಲಿಯ ಭಾರತೀಯ ರೈಲ್ವೆ ಬೋರ್ಡ್ ನವರು, ಉಭಯ ರೈಲ್ವೆ ಗೇಟ್ ಬಳಿ ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ 35. 14 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿಯನ್ನು ಅನುಮೋದನೆಗಾಗಿ ಕೇಂದ್ರದ ರೈಲ್ವೆ ಹಣಕಾಸು ನಿರ್ದೇಶನಾಲಯಕ್ಕೆ ಸಲ್ಲಿಸಿತ್ತು. ಇದೀಗ, ರೈಲ್ವೆ ಮಂತ್ರಾಲಯದ ಹಣಕಾಸು ನಿರ್ದೇಶನಾಲಯವು 35. 14 ಕೋಟಿ ರೂ. ವೆಚ್ಚವನ್ನು ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರದ ತಲಾ ಶೇ. 50 ರಷ್ಟು ಅನುದಾನ ಹಂಚಿಕೆ ಆಧಾರದ ಮೇಲೆ 17. 57 ಕೋಟಿ ರೂ.ಗಳ ಅನುದಾನದಲ್ಲಿ ಸೇತುವೆಗಳ ನಿರ್ಮಾಣಕ್ಕೆ ಅನುಮತಿ ನೀಡಿದೆ. ಕೊಪ್ಪಳ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯೋತ್ಸವ ಕೊಡುಗೆಯಾಗಿ ಕೇಂದ್ರ ಸರ್ಕಾರ ರೈಲ್ವೇ ಗೇಟ್ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಹಾಗೂ ಇದಕ್ಕೆ ಶ್ರಮಿಸಿದ ಎಲ್ಲರಿಗೂ ಸಂಸದ ಸಂಗಣ್ಣ ಕರಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ .
ರೈಲ್ವೆ ಸೇತುವೆ ನಿರ್ಮಾಣಕ್ಕೆ ರೈಲ್ವೆ ಬೋರ್ಡ್ ಅನುಮತಿ : ಸಂಸದ ಸಂಗಣ್ಣ ಕರಡಿ ಹರ್ಷ
ನವದೆಹಲಿಯ ಭಾರತೀಯ ರೈಲ್ವೆ ಬೋರ್ಡ್ ನವರು, ಉಭಯ ರೈಲ್ವೆ ಗೇಟ್ ಬಳಿ ಸೇತುವೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ 35. 14 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿಯನ್ನು ಅನುಮೋದನೆಗಾಗಿ ಕೇಂದ್ರದ ರೈಲ್ವೆ ಹಣಕಾಸು ನಿರ್ದೇಶನಾಲಯಕ್ಕೆ ಸಲ್ಲಿಸಿತ್ತು. ಇದೀಗ, ರೈಲ್ವೆ ಮಂತ್ರಾಲಯದ ಹಣಕಾಸು ನಿರ್ದೇಶನಾಲಯವು 35. 14 ಕೋಟಿ ರೂ. ವೆಚ್ಚವನ್ನು ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರದ ತಲಾ ಶೇ. 50 ರಷ್ಟು ಅನುದಾನ ಹಂಚಿಕೆ ಆಧಾರದ ಮೇಲೆ 17. 57 ಕೋಟಿ ರೂ.ಗಳ ಅನುದಾನದಲ್ಲಿ ಸೇತುವೆಗಳ ನಿರ್ಮಾಣಕ್ಕೆ ಅನುಮತಿ ನೀಡಿದೆ. ಕೊಪ್ಪಳ ಜಿಲ್ಲೆಯ ಜನತೆಗೆ ಸ್ವಾತಂತ್ರ್ಯೋತ್ಸವ ಕೊಡುಗೆಯಾಗಿ ಕೇಂದ್ರ ಸರ್ಕಾರ ರೈಲ್ವೇ ಗೇಟ್ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಹಾಗೂ ಇದಕ್ಕೆ ಶ್ರಮಿಸಿದ ಎಲ್ಲರಿಗೂ ಸಂಸದ ಸಂಗಣ್ಣ ಕರಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ .
0 comments:
Post a Comment