ಬದುಕಿನಲ್ಲಿ ಪಠ್ಯಗಳಿಗೆ ಕೊಡುವಷ್ಟೇ ಮಹತ್ವ ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು. ಅದರಲ್ಲೂ ಕ್ರೀಡೆಯೂ ಅವಿಬಾಜ್ಯ ಅಂಗವಾಗಬೇಕು. ಕ್ರೀಡೆ ಸದೃಡ ದೇಹವನ್ನು ನಿರ್ಮಿಸುವುದಷ್ಟೇ ಅಲ್ಲ ಸದೃಡ ಮನಸ್ಸಿನ ನಿರ್ಮಾಣಕ್ಕೂ ಕಾರಣವಾಗುತ್ತೆ ಹೀಗಾಗಿ ಇಂತಹ ಕ್ರೀಡಾಕೂಟಗಳು ನಿರಂತರವಾಗಿ ನಡೆಯಬೇಕು ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.

ಇತ್ತೀಚಿನ ದಿನಗಳಲ್ಲಿ ಕ್ರೀಡೆಗೂ ಮಹತ್ವ ಸಿಗುತ್ತಿರುವುದು ಗಮನಾರ್ಹ ಸಂಗತಿ. ನಮ್ಮ ಭಾಗದ ಮಕ್ಕಳು ರಾಜ್ಯ,ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಯಶಸ್ಸನ್ನು ಪಡೆಯಲಿ. ಅದಕ್ಕೂ ಪೂರಕವಾದ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಪ್ರತಿಜ್ಞಾ ವಿದಿಯನ್ನು ಸರಸ್ವತಿ ವಿದ್ಯಾಮಂದಿರದ ಮುಖ್ಯೋಪಾಧ್ಯಾಯನಿ ಶ್ರೀಮತಿ ರೇಣುಕಾ ಅತ್ತನೂರ ಭೋದಿಸಿದರು.
ವಿವಿಧ ಶಾಲೆಗಳಿಂದ ಬಂದಂತಹ ದೈಹಿಕ ಶಿಕ್ಷಕರು,ವಿದ್ಯಾರ್ಥಿ/ವಿದ್ಯಾರ್ಥಿನಿಯರೂ ಸೇರಿದಂತೆ ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
0 comments:
Post a Comment