PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ತಾಲೂಕು ಅಳವಂಡಿಯ ಶ್ರೀ ಸಿದ್ದೇಶ್ವರ ಸಂಯುಕ್ತ ಪ.ಪೂ. ಕಾಲೇಜು ಪ್ರಥಮ ಪಿಯುಸಿ ವಿದ್ಯಾರ್ಥಿ ಅಣ್ಣಪ್ಪ ಫಕೀರಪ್ಪ ಪುರದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.
  ಕುಕನೂರು ವಿದ್ಯಾನಂದ ಗುರುಕುಲ ಪ.ಪೂ. ಕಾಲೇಜು ಆವರಣದಲ್ಲಿ ಇತ್ತೀಚೆಗೆ ಜರುಗಿದ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಕ್ರೀಡಾಕೂಟದಲ್ಲಿ ೩೦೦೦ ಮತ್ತು ೫೦೦೦ ಮೀ. ಓಟದ
ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ವಿದ್ಯಾರ್ಥಿ ಆಯ್ಕೆಯಾಗಿದ್ದಾನೆ.  ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ಶಿಕ್ಷಕ ಮತ್ತು ವಿದ್ಯಾರ್ಥಿ ಬಳಗ ಅಭಿನಂದನೆ ಸಲ್ಲಿಸಿದ್ದಾರೆ.

Advertisement

0 comments:

Post a Comment

 
Top