ಕೊಪ್ಪಳ: ಮಾನಸಿಕ ಮತ್ತು ದೈಹಿಕ ಸದೃಡತೆಗೆ ಕ್ರೀಡೆಗಳ ಅವಶ್ಯವಿದೆ ಎಂದು ಕೊಪ್ಪಳ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅಭಿಪ್ರಾಯ ಪಟ್ಟರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ್ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಮಾತನಾಡಿ,ಸಮಾಜದಲ್ಲಿ ಏನಾದರೂ ಬದಲಾವಣೆಯನ್ನು ಬಯಸುವುದಾದರೆ ಅದು ಶಿಕ್ಷಕರಿಂದ ಮಾತ್ರ ಸಾಧ್ಯವಾಗುತ್ತದೆ.ನೌಕರರ ಸಂಘದ ಅನೇಕ ಬೇಡಿಕೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಬೇಕು ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಪ್ರಭು ಕಿಡದಾಳ ಮಾತನಾಡುತ್ತ,ನಮ್ಮ ಸಂಘದ ವತಿಯಿಂದ ಈಗಾಗಲೇ ಮಹಿಳಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಟ್ಟದ ಶಿಕ್ಷಕರ ದಿನಾಚರಣೆಗಳನ್ನು ವಿಶೇಷವಾಗಿ ಆಚರಿಸಲಾಗಿದೆ.ಇಂತಹ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲು ಸರ್ಕಾರವು ಯಾವುದೇ ಅನುದಾನ ನೀಡುತ್ತಿಲ್ಲ.ಆದ್ದರಿಂದ ಇಂತಹ ಕ್ರೀಡಾಕೂಟಗಳಿಗೆ ಸರ್ಕಾರಿವು ಮುಂದಿನಗಳಲ್ಲಾದರೂ ಅನುದಾನವನ್ನು ನೀಡುವಂತೆ ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆಯ ಅಧ್ಯಕ್ಷರಾದ ಲತಾ.ವಿ.ಸಂಡೂರ,ಮಾಜಿ ಅಧ್ಯಕ್ಷರಾದ ಸುರೇಶ ದೇಸಾಯಿ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಉಮೇಶ ಪೂಜಾರ,ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಮಕೃಷ್ಣಯ್ಯಾ.ಟಿ.,ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಪ್ಪ ಜೋಗಿ,ಯಲಬುರ್ಗಾ ತಾಲೂಕ ಅಧ್ಯಕ್ಷರಾದ ವೈ.ಜಿ.ಪಾಟೀಲ,ಅಂಗವಿಕಲ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಬೀರಪ್ಪ ಅಂಡಗಿ ಚಿಲವಾಡಗಿ,ಸಂಚಾಲಕರಾದ ಭರಮಪ್ಪ ಕಟ್ಟಿಮನಿ,ಜಿಲ್ಲಾಧ್ಯಕ್ಷರಾದ ಚನ್ನಬಸಪ್ಪ ಬೇಲ್ಲದ,ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಬಿ.ಕುರಿ,ಪ್ರಾ.ಶಾ.ಶಿ.ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶಿವಾನಂದ ನಾಗೂರ,ಖಂಜಾಚಿ ಖಾದರಸಾಬ ಹುಲ್ಲೂರ,ಗಂಗಾವತಿ ತಾಲೂಕ ಅಧ್ಯಕ್ಷರಾದ ಶರಣೇಗೌಡ,ಯಲಬುರ್ಗಾ ತಾಲೂಕ ಅಧ್ಯಕ್ಷರಾದ ರಾಮಣ್ಣ ತಳವಾರ,ಕುಷ್ಟಗಿ ಅಧ್ಯಕ್ಷರಾದ ಅಮರೇಗೌಡ ಎಸ್.ಎಚ್.,ಕೊಪ್ಪಳ ತಾಲೂಕ ಅಧ್ಯಕ್ಷರಾದ ಮಂಜುನಾಥ.ಬಿ.ಉಪಾಧ್ಯಕ್ಷರಾದ ಬಸಪ್ಪ ಸೊಂಪುರ,ಪ್ರಾ.ಶಾ.ಶಿ.ಪತ್ತಿನ ಸಂಘದ ಕೊಪ್ಪಳ ತಾಲೂಕ ಅಧ್ಯಕ್ಷರಾದ ಮೈಲಾರಗೌಡ,ಕುಷ್ಟಗಿ ತಾಲೂಕ ಅಧ್ಯಕ್ಷರಾದ ಸಿದ್ರಾಮಪ್ಪ ಅಮರಾವತಿ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ನಿರ್ದೇಶಕರಾದ ಸುರೇಂದ್ರ ದೇಸಾಯಿ ನಿರೂಪಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನುಬಾಷ ಅತ್ತಾರ ಸ್ವಾಗತಿಸಿ ವಂದಿಸಿದರು.
0 comments:
Post a Comment