PLEASE LOGIN TO KANNADANET.COM FOR REGULAR NEWS-UPDATES

       ಕೊಪ್ಪಳದಲ್ಲಿ ಇಂದು ೨೫/೧೧/೨೦೧೪ ಮಂಗಳವಾರ, ಕರ್ನಾಟಕ ರಾಜ್ಯ ವೈದ್ಯಕೀಯ ಪ್ರಯೋಗಶಾಲಾ ಟೆಕ್ನಾಲಜಿಸ್ಟರ ಸಂಘ(ರಿ) ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯೋಗದಲ್ಲಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಳೆ ಜಿಲ್ಲಾ ಆಸ್ಪತ್ರೆ, ಕೊಪ್ಪಳದಲ್ಲಿ ಬೆಳೆಗ್ಗೆ ೯:೦೦ ರಿಂದ ೫:೦೦ ರವರೆಗೆ ಶಿಬಿರ ಜರುಗಲಿದ್ದು ರಕ್ತದಾನಿಗಳು ಸ್ವಯಂ ಪ್ರೇರಿತರಾಗಿ ಆಗಮಿಸಿ ರಕ್ತದಾನ ಮಾಡಬೇಕೆಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ  ಕೋರಿದ್ದಾರೆ.

Advertisement

0 comments:

Post a Comment

 
Top