PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ: ಶ್ರೀಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ೨೦೧೪-೧೫ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಪ್ರಾಧ್ಯಾಪಕರಾದ ಶಿವಕುಮಾರ ಕುಕನೂರ ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪ್ರಾಧ್ಯಾಪಕರಾದ ಆದೇಶ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಧ್ಯಾಪಕರಾದ ಡಾ.ವೀರೇಶಕುಮಾರ ಅವರು ವಹಿಸಿಕೊಂಡಿದ್ದರು. ಉಪನ್ಯಾಸಕರಾದ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕುಮಾರಿ ಜಿ.ಸುನಿತಾರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮಕ್ಕೆ ಶರಣಪ್ಪ ಚೌಡ್ಕಿ ಸ್ವಾಗತಿಸಿದರೆ, ನಾಗರಾಜ ವಂದಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ವೀರಭದ್ರಪ್ಪ ನಿರ್ವಹಿಸಿದರು.

Advertisement

0 comments:

Post a Comment

 
Top