PLEASE LOGIN TO KANNADANET.COM FOR REGULAR NEWS-UPDATES



 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಫೆ.೧೯ ರಂದು ಬೆಳಿಗ್ಗೆ ೯-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ  ಹಾಗೂ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಕಾರ್ಯಕ್ರಮ ನಡೆಯಲಿದೆ. 
  ಸಣ್ಣ ನೀರಾವರಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸಲಿದ್ದು, ಕೊಪ್ಪಳ ಜಿಲ್ಲಾ ಪಂಚಾಯತ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಶಾಸಕ ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್ ಸೇರಿದಂತೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ತಾಲೂಕಾ ಪಂಚಾಯತ ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ, ನಗರಾಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ ಅನಿಲ್‌ಕುಮಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
  ಸಮಾರಂಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಕೊಪ್ಪಳದ ವಿಶ್ರಾಂತ ಸಹಾಯಕ ಪ್ರಾಧ್ಯಾಪಕ ಪ್ರೊ. ಎಂ.ಎಂ.ಕಂಬಾಳಿಮಠ ಹಾಗೂ ತ್ರಿಪದಿ ಕವಿ ಸರ್ವಜ್ಞರ ಕುರಿತು ಕಾತರಕಿ ಗುಡ್ಲಾನೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ||ಸುಮತಿ ಹಿರೇಮಠ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಸಾಹಿತ್ಯ ಭವನದಲ್ಲಿ ನಡೆಯಲಿರುವ ಈ ವೇದಿಕೆ ಕಾರ್ಯಕ್ರಮದ ಬಳಿಕ ಅಂದು ಬೆಳಿಗ್ಗೆ ೧೧ ಗಂಟೆಗೆ ಸಾಹಿತ್ಯ ಭವನದಿಂದ ಜವಾಹರ ರಸ್ತೆ ಮುಖಾಂತರ ತುಳಜಾ ಭವಾನಿ ದೇವಸ್ಥಾನದವರೆಗೆ ಛತ್ರಪತಿ ಶಿವಾಜಿ ಮಹಾರಾಜರ ಹಾಗೂ ಸರ್ವಜ್ಞರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.


Advertisement

0 comments:

Post a Comment

 
Top