ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಾರಾಧನೆಯ ನಿಮಿತ್ಯ ಯಶಸ್ವೀ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಕೊಪ್ಪಳ: ನಗರದ ಶ್ರೀಗವಿಮಠದಲ್ಲಿ ದಿನಾಂಕ ೧೫-೦೩-೨೦೧೫ ರವಿವಾರ ಬೆಳಿಗ್ಗೆ ೧೦ ರಿಂದ ೪ ಗಂಟೆಯವರೆಗೆ ಲಿಂಗೈಕ್ಯ ಜ. ಶ್ರೀ ಶಿವಶಾಂತವೀರ ಮಹಾಶಿವಯೋಗಿಗಳ ಪುಣ್ಯಸ್ಮರಣೆಯ ನಿಮಿತ್ಯ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ಶ್ರೀಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಶ್ರೀಗವಿಮಠದ ಆವರಣದಲ್ಲಿ ನಡೆಯಲಿದೆ.
ಈ ಶಿಬಿರದಲ್ಲಿ ನಾಡಿನ ಹೆಸರಾಂತ ವೈದ್ಯರು ಭಾಗವಹಿಸಿ ವಿವಿಧ ರೋಗಿಗಳ ತಪಾಸಣೆ ನಡೆಸಿ ನಂತರ ಚಿಕಿತ್ಸೆ ನೀಡುವರು. ಕೊಪ್ಪಳ ಹಾಗೂ ಸುತ್ತಮುತ್ತಲಿನ ಭಕ್ತಾಧಿಗಳು ಈ ಶಿಬಿರದ ಉಪಯುಕ್ತತೆ ಮಾಡಿಕೊಳ್ಳಬೇಕೆಂದು ಶ್ರೀಗವಿಸಿದ್ಧೇಶ್ವರ ಆಯುರ್ವೇದ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಪ್ರಾಚಾರ್ಯ ಡಾ.ಬಸವರಾಜ ಸವಡಿ ತಿಳಿಸಿದ್ದಾರೆ
0 comments:
Post a Comment