ಕೊಪ್ಪಳ, ಮಾ.೧೯ : ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನರಾಮ್ ರವರ ೧೦೮ನೇ ಹಾಗೂ ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ ೧೨೪ನೇ ಜನ್ಮ ದಿನಾಚರಣೆಯನ್ನು ಬರುವ ಏಪ್ರಿಲ್ ತಿಂಗಳಿನಲ್ಲಿ ಆಚರಿಸುವ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಮಾ.೨೪ ರಂದು ಮಧ್ಯಾಹ್ನ ೧೨ ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಆರ್.ಆರ್.ಜನ್ನು ಅವರು ವಹಿಸುವರು ಎಂದು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶುಭಾ ಅವರು ತಿಳಿಸಿದ್ದಾರೆ.
0 comments:
Post a Comment