PLEASE LOGIN TO KANNADANET.COM FOR REGULAR NEWS-UPDATES

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಘಟಿಕೋತ್ಸವ- ನುಡಿಹಬ್ಬಕ್ಕೆ ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು.

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾg ಘಟಿಕೋತ್ಸವ ನುಡಿಹಬ್ಬದಲ್ಲಿ ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಭಾಗವಹಿಸಿ, ಡಾ. ಪಿ.ಎಸ್. ಶಂಕರ್ ಎಸ್.ಆರ್. ರಾಮಸ್ವಾಮಿ, ಪ್ರೊ. ಎಂ.ಎಚ್. ಕೃಷ್ಣಯ್ಯ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿದರು. ಹಾಗೂ ಡಿ.ಲಿಟ್. ಮತ್ತು ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡಿದರು. ನವದೆಹಲಿಯ ಜವಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಕವಿ ಪ್ರೊ. ಎಚ್.ಎಸ್. ಶಿವಪ್ರಕಾಶ್ ಘಟಿಕೋತ್ಸವ ಭಾಷಣ ನಡೆಸಿಕೊಟ್ಟರು. ಕುಲಪತಿ ಡಾ.ಹಿ.ಚಿ.ಬೋರಲಿಂಗಯ್ಯ ಸ್ವಾಗತಿಸಿದರು. ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬಂಡ ಹಾಗೂ ಡೀನ್‌ಗಳು ಮತ್ತು ಸಿಂಡಿಕೇಟ್ ಸದಸ್ಯರು ಹಾಜರಿದ್ದರು.ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಇವರನ್ನು ನವರಂಗ ಮುಖ್ಯ ವೇದಿಕೆಯವರಿಗೆ ಮೆರವಣಿಗೆಯಲ್ಲಿ ಕರೆ ತರಲಾಯಿತು.
--------------------

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಘಟಿಕೋತ್ಸವ- ನುಡಿಹಬ್ಬದಲ್ಲಿ ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಇವರು ಡಾ.ಪಿ.ಎಸ್. ಶಂಕರ್ ಅವರಿಗೆ ಗೌರವ ನಾಡೋಜ ಪದವಿ ಪ್ರದಾನ ಮಾಡಿದರು. ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ, ಎಚ್.ಎಸ್.ಶಿವಪ್ರಕಾಶ್ ಮತ್ತಿತರರು ಹಾಜರಿದ್ದರು

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಘಟಿಕೋತ್ಸವ- ನುಡಿಹಬ್ಬದಲ್ಲಿ ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಇವರು ಎಸ್.ಆರ್.ರಾಮಸ್ವಾಮಿ ಅವರಿಗೆ ಗೌರವ ನಾಡೋಜ ಪದವಿ ಪ್ರದಾನ ಮಾಡಿದರು. ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ, ಎಚ್.ಎಸ್.ಶಿವಪ್ರಕಾಶ್ ಮತ್ತಿತರರು ಹಾಜರಿದ್ದರು.


ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಘಟಿಕೋತ್ಸವ- ನುಡಿಹಬ್ಬದಲ್ಲಿ ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಇವರು ಎಂ.ಎಚ್.ಕೃಷ್ಣಯ್ಯ ಅವರಿಗೆ ಗೌರವ ನಾಡೋಜ ಪದವಿ ಪ್ರದಾನ ಮಾಡಿದರು. ಕುಲಪತಿ ಡಾ.ಹಿ.ಚಿ. ಬೋರಲಿಂಗಯ್ಯ, ಎಚ್.ಎಸ್.ಶಿವಪ್ರಕಾಶ್ ಮತ್ತಿತರರು ಹಾಜರಿದ್ದರು.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಘಟಿಕೋತ್ಸವ- ನುಡಿಹಬ್ಬದಲ್ಲಿ ರಾಜ್ಯಪಾಲ ಹಾಗೂ ಕುಲಾಧಿಪತಿ ವಜುಭಾಯಿ ರೂಡಾಭಾಯಿ ವಾಲಾ ಇವರು ಡಿಲಿಟ್ ಹಾಗೂ ಪಿಎಚ್‌ಡಿ ಪದವಿ ಪ್ರಧಾನ ಮಾಡಿದರು. ಅವರು ಪ್ರದರ್ಶಿಸಿದ್ದು ಹೀಗೆ.



Advertisement

0 comments:

Post a Comment

 
Top