PLEASE LOGIN TO KANNADANET.COM FOR REGULAR NEWS-UPDATES


: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಉಚಿತ ಅಕ್ಕಿ, ಗೋಧಿ ವಿತರಿಸುವ ಕಾರ್ಯಕ್ರಮಕ್ಕೆ ಮೇ. ೦೧ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಚಾಲನೆ ನೀಡಲಿದ್ದಾರೆ.
  ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಪಡಿತರ ಚೀಟಿಯಲ್ಲಿರುವ ಸದಸ್ಯರ ಸಂಖ್ಯೆಗನುಗುಣವಾಗಿ ಯಾವುದೇ ಪರಿಮಿತಿ ಇಲ್ಲದೆ ಪ್ರತಿಯೊಬ್ಬ ಸದಸ್ಯನಿಗೆ ಉಚಿತವಾಗಿ ೫ ಕೆ.ಜಿ ಆಹಾರಧಾನ್ಯ (ಅಕ್ಕಿ ೩ ಕೆ.ಜಿ + ಗೋಧಿ ೨ ಕೆ.ಜಿ) ಗಳನ್ನು ನೀಡುವ ಯೋಜನೆ,  ಅಲ್ಲದೆ ಪ್ರತಿ ಪಡಿತರ ಕಾರ್ಡಿಗೆ  ರೂ: ೨/- ದರದಲ್ಲಿ ಅಯೋಡಿನ್‌ಯುಕ್ತ ಉಪ್ಪು, ಹಾಗೂ ರೂ: ೨೫/- ರಂತೆ ೧ ಲೀಟರ್ ತಾಳೆ ಎಣ್ಣೆಯನ್ನು ವಿತರಿಸುವ ಯೋಜನೆಗೆ ಮೇ. ೦೧ ರಂದು ಜಾರಿಗೆ ಬರಲಿದೆ.  ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅಂದು  ಬೆಳಿಗ್ಗೆ ೧೧-೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಜರುಗಲಿದೆ.  ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಲಿದ್ದು, ಸಂಸದ ಸಂಗಣ್ಣ ಕರಡಿ, ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ್ ಮೇಲಿನಮನಿ, ತಾ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Advertisement

0 comments:

Post a Comment

 
Top